‘ಬಿಜೆಪಿ ಸರ್ಕಾರ ಇದ್ದಾಗ ಒಂದೂ ಪ್ರಕರಣವನ್ನು ಸಿಬಿಐಗೆ ವಹಿಸಿರಲಿಲ್ಲ’ ಎಂಬ ಕಾಂಗ್ರೆಸ್ನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ನಮ್ಮ ಸರ್ಕಾರ ಇದ್ದಾಗ ಇಂತಹ ಗಂಭೀರ ಪ್ರಕರಣ ನಡೆದಿರಲಿಲ್ಲ. ಹೀಗಾಗಿ ಸಿಬಿಐಗೆ ವಹಿಸುವ ಪ್ರಶ್ನೆಯೇ ಬರಲ್ಲ. ಈಗ ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಲು ಏಕೆ ಹೆದರುತ್ತಿದೆ? ಸಿಬಿಐ ಸ್ವತಂತ್ರವಾಗಿ ತನಿಖೆ ನಡೆಸುತ್ತದೆ. ಅನ್ಯಾಯದಿಂದ ಆರೋಪ ಮಾಡಿದ್ದರೆ ಅನೇಕ ಪ್ರಕರಣಗಳಲ್ಲಿ ಆರೋಪ ಮುಕ್ತಗೊಳಿಸಿದೆ’ ಎಂದರು.