<p><strong>ಹುಬ್ಬಳ್ಳಿ:</strong> ಮಕ್ಕಳಲ್ಲಿ ಉತ್ತಮ ಮೌಲ್ಯಗಳನ್ನು ಬಿತ್ತಲು ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗಿದೆ. ಆದರೆ, ವಿರೋಧಿಗಳು ಕೇಸರೀಕರಣದ ಪಟ್ಟ ಕಟ್ಟುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹರಿಹಾಯ್ದರು.</p>.<p>ಇಲ್ಲಿನ ಸಂಸ್ಕಾರ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಶನಿವಾರ ಅಂಚೆ ಇಲಾಖೆಯ ವಿಶೇಷ ಪೋಸ್ಟಲ್ ಸ್ಟಾಂಪ್ ಬುಕ್ಲೆಟ್ನ ಬಿಡುಗಡೆ, ಶಾಲಾ ಗ್ರಂಥಾಲಯದ ಉದ್ಘಾಟನೆ ಮತ್ತು ಮಹಾವೀರ ಲಿಂಬ್ ಸೆಂಟರ್ನ ಜಾಲತಾಣ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಜಗತ್ತು ಸುಂದರವಾಗಿ ಉಳಿಯಲು ಮೌಲ್ಯಗಳನ್ನು ಬಿತ್ತುವ ಕೆಲಸ ಮಾಡುವುದು ಅಗತ್ಯವಿದೆ. ಈ ಎಲ್ಲ ಉದ್ದೇಶಗಳು ಹೊಸ ಶಿಕ್ಷಣ ನೀತಿಯಲ್ಲಿವೆ. ದೇಶದ ಅಭಿವೃದ್ಧಿ ಹಾಗೂ ಮಕ್ಕಳ ಹಿತದೃಷ್ಟಿಯಿಂದ ನೀತಿ ಜಾರಿಗೆ ತರಲಾಗಿದೆ. ಭಾರತದ ಮೌಲ್ಯಗಳನ್ನು ವಿದೇಶಿಗರು ಅಧ್ಯಯನ ಮಾಡುತ್ತಿದ್ದಾರೆ. ಇಲ್ಲಿ ದೇಶದ ಮೌಲ್ಯಗಳನ್ನು ಎತ್ತಿತೋರಿಸುವ ಕೆಲಸಕ್ಕೆ ಮುಂದಾಗಿದ್ದೇವೆ ಅಷ್ಟೇ’ ಎಂದರು.</p>.<p>ಮಕ್ಕಳಲ್ಲಿ ಕ್ರೀಡಾ ಮನೋಭಾವ ಹೆಚ್ಚಿಸಬೇಕು, ಮುಂದಿನ ಒಲಿಂಪಿಕ್ಸ್ನಲ್ಲಿ ಸಂಸ್ಕಾರ ಶಾಲೆಯ ಮಕ್ಕಳೂ ಅರ್ಹತೆ ಪಡೆಯುವಂತಾಬೇಕು ಎಂದು ಆಶಿಸಿದರು.</p>.<p>ಸಕ್ಕರೆ ಖಾತೆ ಸಚಿವ ಶಂಕರಪಾಟೀಲ ಮುನೇನಕೊಪ್ಪ ಬುಕ್ಲೆಟ್ ಬಿಡುಗಡೆ ಮಾಡಿದರು. ಶಾಸಕ ಜಗದೀಶ ಶೆಟ್ಟರ್, ಸಂಸ್ಕಾರ ಶಾಲೆಯ ಸಂಸ್ಥಾಪಕ ಮಹೇಂದ್ರ ಸಿಂಘಿ, ಸಾರ್ವಜನಿಕ ಸಂಪರ್ಕಾಧಿಕಾರಿ ಎಂ.ಎಂ. ದಾರೊ ಗುರೂಜಿ, ವಿಜಯ ಶೆಟ್ಟರ್, ಮಹವೀರ ಕುಂದೂರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಮಕ್ಕಳಲ್ಲಿ ಉತ್ತಮ ಮೌಲ್ಯಗಳನ್ನು ಬಿತ್ತಲು ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗಿದೆ. ಆದರೆ, ವಿರೋಧಿಗಳು ಕೇಸರೀಕರಣದ ಪಟ್ಟ ಕಟ್ಟುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹರಿಹಾಯ್ದರು.</p>.<p>ಇಲ್ಲಿನ ಸಂಸ್ಕಾರ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಶನಿವಾರ ಅಂಚೆ ಇಲಾಖೆಯ ವಿಶೇಷ ಪೋಸ್ಟಲ್ ಸ್ಟಾಂಪ್ ಬುಕ್ಲೆಟ್ನ ಬಿಡುಗಡೆ, ಶಾಲಾ ಗ್ರಂಥಾಲಯದ ಉದ್ಘಾಟನೆ ಮತ್ತು ಮಹಾವೀರ ಲಿಂಬ್ ಸೆಂಟರ್ನ ಜಾಲತಾಣ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಜಗತ್ತು ಸುಂದರವಾಗಿ ಉಳಿಯಲು ಮೌಲ್ಯಗಳನ್ನು ಬಿತ್ತುವ ಕೆಲಸ ಮಾಡುವುದು ಅಗತ್ಯವಿದೆ. ಈ ಎಲ್ಲ ಉದ್ದೇಶಗಳು ಹೊಸ ಶಿಕ್ಷಣ ನೀತಿಯಲ್ಲಿವೆ. ದೇಶದ ಅಭಿವೃದ್ಧಿ ಹಾಗೂ ಮಕ್ಕಳ ಹಿತದೃಷ್ಟಿಯಿಂದ ನೀತಿ ಜಾರಿಗೆ ತರಲಾಗಿದೆ. ಭಾರತದ ಮೌಲ್ಯಗಳನ್ನು ವಿದೇಶಿಗರು ಅಧ್ಯಯನ ಮಾಡುತ್ತಿದ್ದಾರೆ. ಇಲ್ಲಿ ದೇಶದ ಮೌಲ್ಯಗಳನ್ನು ಎತ್ತಿತೋರಿಸುವ ಕೆಲಸಕ್ಕೆ ಮುಂದಾಗಿದ್ದೇವೆ ಅಷ್ಟೇ’ ಎಂದರು.</p>.<p>ಮಕ್ಕಳಲ್ಲಿ ಕ್ರೀಡಾ ಮನೋಭಾವ ಹೆಚ್ಚಿಸಬೇಕು, ಮುಂದಿನ ಒಲಿಂಪಿಕ್ಸ್ನಲ್ಲಿ ಸಂಸ್ಕಾರ ಶಾಲೆಯ ಮಕ್ಕಳೂ ಅರ್ಹತೆ ಪಡೆಯುವಂತಾಬೇಕು ಎಂದು ಆಶಿಸಿದರು.</p>.<p>ಸಕ್ಕರೆ ಖಾತೆ ಸಚಿವ ಶಂಕರಪಾಟೀಲ ಮುನೇನಕೊಪ್ಪ ಬುಕ್ಲೆಟ್ ಬಿಡುಗಡೆ ಮಾಡಿದರು. ಶಾಸಕ ಜಗದೀಶ ಶೆಟ್ಟರ್, ಸಂಸ್ಕಾರ ಶಾಲೆಯ ಸಂಸ್ಥಾಪಕ ಮಹೇಂದ್ರ ಸಿಂಘಿ, ಸಾರ್ವಜನಿಕ ಸಂಪರ್ಕಾಧಿಕಾರಿ ಎಂ.ಎಂ. ದಾರೊ ಗುರೂಜಿ, ವಿಜಯ ಶೆಟ್ಟರ್, ಮಹವೀರ ಕುಂದೂರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>