ಆದಾಯ ತೆರಿಗೆ (ಐ.ಟಿ) ಇಲಾಖೆ ಕಾಂಗ್ರೆಸ್ಗೆ ಹೊಸದಾಗಿ ನೋಟಿಸ್ ನೀಡಿರುವ ಕುರಿತು ನಗರದಲ್ಲಿ ಭಾನುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘₹2 ಸಾವಿರಕ್ಕಿಂತ ಹೆಚ್ಚು ನಗದು ರೂಪದಲ್ಲಿ ಪಡೆಯಲು ಅವಕಾಶ ಇಲ್ಲ. ಆದರೆ, ಕಾಂಗ್ರೆಸ್ನವರು ನಿಯಮ ಉಲ್ಲಂಘಿಸಿ ಕೋಟ್ಯಂತರ ರೂಪಾಯಿ ಹಣ ಸಂಗ್ರಹಿಸಿದ್ದಾರೆ. ಹೀಗಾಗಿ ಐ.ಟಿ ಅಧಿಕಾರಿಗಳು ನೋಟಿಸ್ ಕೊಟ್ಟಿದ್ದಾರೆ. ಅದರ ಬದಲು ಪ್ರೀತಿಯಿಂದ ಸನ್ಮಾನ ಮಾಡಬೇಕಿತ್ತಾ’ ಎಂದು ಪ್ರಶ್ನಿಸಿದರು.