<p><strong>ಹುಬ್ಬಳ್ಳಿ</strong>: ‘ಕಾಂಗ್ರೆಸ್ನವರಿಗೆ ಕಾನೂನಿನ ಮೇಲೆ ಗೌರವ ಇಲ್ಲ. ಅಧಿಕಾರಿಗಳನ್ನು ತಮ್ಮ ತಾಳಕ್ಕೆ ತಕ್ಕಂತೆ ಕುಣಿಸುತ್ತಿದ್ದಾರೆ. ಕೆಲವು ಅಧಿಕಾರಿಗಳು ಸಹ ಅದೇ ರೀತಿ ವರ್ತಿಸುತ್ತಿದ್ದಾರೆ’ ಎಂದು ಪ್ರಲ್ಹಾದ ಜೋಶಿ ಆರೋಪಿಸಿದರು.</p>.<p>ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯವನ್ನು ಮತಾಂಧ ಕೇಂದ್ರವನ್ನಾಗಿ ಮಾಡಲಾಗುತ್ತದೆ. ಇದು ಒಂದು ವರ್ಗ, ಮತಾಂಧರ ಪರವಾಗಿ ಇರುವ ಸರ್ಕಾರ‘ ಎಂದು ಆರೋಪಿಸಿದರು.</p>.<p>‘ವಿದೇಶಿ ವ್ಯಾಸಂಗಕ್ಕಾಗಿ ಮುಸ್ಲಿಂ ವಿದ್ಯಾರ್ಥಿಗಳಿಗೆ ₹30 ಲಕ್ಷ ಬಡ್ಡಿ ರಹಿತ ಸಾಲ, ವಕ್ಫ್ ಆಸ್ತಿ ರಕ್ಷಣೆಗೆ ₹150 ಕೋಟಿ, ಮುಸ್ಲಿಮರ ಅಭಿವೃದ್ಧಿಗೆ ₹4 ಸಾವಿರ ಕೋಟಿ, ಅಲ್ಪಸಂಖ್ಯಾರ ಕಾಲೊನಿ ಅಭಿವೃದ್ಧಿಗೆ ₹1 ಸಾವಿರ ಕೋಟಿಯನ್ನು ಸರ್ಕಾರ ನೀಡುತ್ತಿದೆ. ಇವೆಲ್ಲವೂ ಅಲ್ಪಸಂಖ್ಯಾತರ ತುಷ್ಟೀಕರಣಕ್ಕೆ ಉದಾಹರಣೆ‘ ಎಂದು ಹೇಳಿದರು. </p>.<p>‘2019ರ ಅಧಿಸೂಚನೆಯಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲಕ, ಚಾಲಕ ಕಂ ನಿರ್ವಾಹಕ ಸೇರಿ 2814 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು. ಆದರೆ ಒಂದು ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಿರುವುದು ತಪ್ಪು. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಕರೆ ಮಾಡಿ ಸಮಸ್ಯೆ ಸರಿಪಡಿಸುವಂತೆ ಮನವಿ ಮಾಡಲಾಗಿದೆ’ ಎಂದರು.</p>.<p>‘ಒಳಮೀಸಲಾತಿ ಜಾರಿಯಾದರೆ ನೇಮಕಾತಿ ಮತ್ತಷ್ಟು ವಿಳಂಬವಾಗುತ್ತದೆ ಎಂಬುದು ಅಭ್ಯರ್ಥಿಗಳ ಆತಂಕ. ಹೀಗಾಗಿ ನಿರ್ವಾಹಕ ಪರವಾನಗಿ ಇಲ್ಲದ ಅಭ್ಯರ್ಥಿಗಳಿಗೆ ಪರವಾನಗಿ ಮಾಡಿಸಿಕೊಳ್ಳಲು ಕಾಲಾವಕಾಶ ನೀಡಿ, ನೇಮಕಾತಿ ಮಾಡಿಕೊಳ್ಳಬೇಕು. ಅಭ್ಯರ್ಥಿಗಳಿಗೆ ಅನ್ಯಾಯವಾಗಬಾರದು‘ ಎಂದು ಹೇಳಿದರು.</p>.<p><span class="bold"><strong>ಮನವಿ ಸಲ್ಲಿಕೆ:</strong></span> ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೇಮಕಾತಿಯಲ್ಲಿ ಆಗಿರುವ ಅನ್ಯಾಯ ಸರಿಪಡಿಸುವಂತೆ ಅಭ್ಯರ್ಥಿಗಳು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಭಾನುವಾರ ಅವರ ನಿವಾಸದಲ್ಲಿ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಕಾಂಗ್ರೆಸ್ನವರಿಗೆ ಕಾನೂನಿನ ಮೇಲೆ ಗೌರವ ಇಲ್ಲ. ಅಧಿಕಾರಿಗಳನ್ನು ತಮ್ಮ ತಾಳಕ್ಕೆ ತಕ್ಕಂತೆ ಕುಣಿಸುತ್ತಿದ್ದಾರೆ. ಕೆಲವು ಅಧಿಕಾರಿಗಳು ಸಹ ಅದೇ ರೀತಿ ವರ್ತಿಸುತ್ತಿದ್ದಾರೆ’ ಎಂದು ಪ್ರಲ್ಹಾದ ಜೋಶಿ ಆರೋಪಿಸಿದರು.</p>.<p>ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯವನ್ನು ಮತಾಂಧ ಕೇಂದ್ರವನ್ನಾಗಿ ಮಾಡಲಾಗುತ್ತದೆ. ಇದು ಒಂದು ವರ್ಗ, ಮತಾಂಧರ ಪರವಾಗಿ ಇರುವ ಸರ್ಕಾರ‘ ಎಂದು ಆರೋಪಿಸಿದರು.</p>.<p>‘ವಿದೇಶಿ ವ್ಯಾಸಂಗಕ್ಕಾಗಿ ಮುಸ್ಲಿಂ ವಿದ್ಯಾರ್ಥಿಗಳಿಗೆ ₹30 ಲಕ್ಷ ಬಡ್ಡಿ ರಹಿತ ಸಾಲ, ವಕ್ಫ್ ಆಸ್ತಿ ರಕ್ಷಣೆಗೆ ₹150 ಕೋಟಿ, ಮುಸ್ಲಿಮರ ಅಭಿವೃದ್ಧಿಗೆ ₹4 ಸಾವಿರ ಕೋಟಿ, ಅಲ್ಪಸಂಖ್ಯಾರ ಕಾಲೊನಿ ಅಭಿವೃದ್ಧಿಗೆ ₹1 ಸಾವಿರ ಕೋಟಿಯನ್ನು ಸರ್ಕಾರ ನೀಡುತ್ತಿದೆ. ಇವೆಲ್ಲವೂ ಅಲ್ಪಸಂಖ್ಯಾತರ ತುಷ್ಟೀಕರಣಕ್ಕೆ ಉದಾಹರಣೆ‘ ಎಂದು ಹೇಳಿದರು. </p>.<p>‘2019ರ ಅಧಿಸೂಚನೆಯಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲಕ, ಚಾಲಕ ಕಂ ನಿರ್ವಾಹಕ ಸೇರಿ 2814 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು. ಆದರೆ ಒಂದು ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಿರುವುದು ತಪ್ಪು. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಕರೆ ಮಾಡಿ ಸಮಸ್ಯೆ ಸರಿಪಡಿಸುವಂತೆ ಮನವಿ ಮಾಡಲಾಗಿದೆ’ ಎಂದರು.</p>.<p>‘ಒಳಮೀಸಲಾತಿ ಜಾರಿಯಾದರೆ ನೇಮಕಾತಿ ಮತ್ತಷ್ಟು ವಿಳಂಬವಾಗುತ್ತದೆ ಎಂಬುದು ಅಭ್ಯರ್ಥಿಗಳ ಆತಂಕ. ಹೀಗಾಗಿ ನಿರ್ವಾಹಕ ಪರವಾನಗಿ ಇಲ್ಲದ ಅಭ್ಯರ್ಥಿಗಳಿಗೆ ಪರವಾನಗಿ ಮಾಡಿಸಿಕೊಳ್ಳಲು ಕಾಲಾವಕಾಶ ನೀಡಿ, ನೇಮಕಾತಿ ಮಾಡಿಕೊಳ್ಳಬೇಕು. ಅಭ್ಯರ್ಥಿಗಳಿಗೆ ಅನ್ಯಾಯವಾಗಬಾರದು‘ ಎಂದು ಹೇಳಿದರು.</p>.<p><span class="bold"><strong>ಮನವಿ ಸಲ್ಲಿಕೆ:</strong></span> ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೇಮಕಾತಿಯಲ್ಲಿ ಆಗಿರುವ ಅನ್ಯಾಯ ಸರಿಪಡಿಸುವಂತೆ ಅಭ್ಯರ್ಥಿಗಳು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಭಾನುವಾರ ಅವರ ನಿವಾಸದಲ್ಲಿ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>