ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೇವಸ್ಥಾನ, ಮಸೀದಿ, ಚರ್ಚ್ಗಳಲ್ಲಿ ಶಬ್ದಮಾಲಿನ್ಯ ಉಂಟು ಮಾಡುವ ಧ್ವನಿವರ್ಧಕಗಳ ನಿರ್ಬಂಧದ ಕುರಿತಾಗಿ ಸುಪ್ರೀಂಕೋರ್ಟ್ ಆದೇಶ ನೀಡಿದೆ. ರಾಜ್ಯ ಸರ್ಕಾರ 15 ದಿನಗಳ ಅವಕಾಶ ನೀಡಿದ್ದರೂ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಈ ಆದೇಶ ಕಸದಬುಟ್ಟಿ ಸೇರಿದೆ. ಕಟ್ಟುನಿಟ್ಟಿನ ನಿರ್ಧಾರ ಕೈಗೊಳ್ಳಲಾಗದಿದ್ದರೆ ರಾಜ್ಯ ಸರ್ಕಾರ ಅಧಿಕಾರದಿಂದ ಕೆಳಗಿಳಿದು, ನನಗೆ ಅಧಿಕಾರ ನೀಡಲಿ’ ಎಂದು ಅಗ್ರಹಿಸಿದರು.