<p><strong>ಹುಬ್ಬಳ್ಳಿ:</strong> ಪೂರ್ವ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 62ರ ಮಂಟೂರು ರಸ್ತೆ, ಭಾರತ ಕಾಲೋನಿ-1 ಭಾರತ ಕಾಲೋನಿ-2 ಮತ್ತು ಕೆ.ಬಿ. ನಗರದಲ್ಲಿ ಸಿಸಿ ರಸ್ತೆ, ಒಳಚರಂಡಿ, ತೆರದ ಚರಂಡಿ ಸೇರಿದಂತೆ ₹ 10ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ ಅಬ್ಬಯ್ಯ ಶನಿವಾರ ಚಾಲನೆ ನೀಡಿದರು.</p>.<p>‘ಮಂಟೂರು ರಸ್ತೆಯು ಪೂರ್ವ ಕ್ಷೇತ್ರದಲ್ಲಿ ಅತ್ಯಂತ ಹಿಂದುಳಿದ ಪ್ರದೇಶವಾಗಿತ್ತು. ನಾನು ಶಾಸಕನಾಗುವ ಮೊದಲು ಈ ಭಾಗದಲ್ಲಿ ಸುಸಜ್ಜಿತ ರಸ್ತೆಗಳೇ ಇರಲಿಲ್ಲ. ಜನರು ಓಡಾಡದ ಪರಿಸ್ಥಿತಿ ಇತ್ತು. ಕಳೆದ 10ವರ್ಷದಲ್ಲಿ ಮಂಟೂರು ಭಾಗಕ್ಕೆ ಅಂದಾಜು ₹ 110ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಮಾಡಲಾಗಿದೆ’ ಎಂದರು.</p>.<p>ಶೀಘ್ರದಲ್ಲೇ ಸೂಪರ್ ಮಾರುಕಟ್ಟೆ: ಮಂಟೂರು ಭಾಗದಲ್ಲಿ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಒಂದು ಸುಸಜ್ಜಿತ ಸೂಪರ್ ಮಾರುಕಟ್ಟೆ ನಿರ್ಮಾಣ ಮಾಡುವ ಯೋಜನೆ ಇದೆ. ಮುಂದಿನ ದಿನಗಳಲ್ಲಿ ಸ್ಥಳ ಗುರುತಿಸಲಾಗುವುದು ಎಂದು ಹೇಳಿದರು. </p>.<p>ಪಾಲಿಕೆ ಸದಸ್ಯ ದೊರೆರಾಜ ಮಣಿಕುಂಟ್ಲಾ, ಪಾಲಿಕೆ ಮಾಜಿ ಸದಸ್ಯರಾದ ಸುಧಾ ಮಣಿಕುಂಟ್ಲಾ, ಬರ್ನಾಬಾಸ್ ಕುಡಲಿ, ವಾರ್ಡ್ ಕಾಂಗ್ರೆಸ್ ಅಧ್ಯಕ್ಷರಾದ ಶರೀಫ್ ಅದ್ವಾನಿ, ಕಾಂಗ್ರೆಸ್ ಮುಖಂಡರು, ಸ್ಥಳೀಯರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಪೂರ್ವ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 62ರ ಮಂಟೂರು ರಸ್ತೆ, ಭಾರತ ಕಾಲೋನಿ-1 ಭಾರತ ಕಾಲೋನಿ-2 ಮತ್ತು ಕೆ.ಬಿ. ನಗರದಲ್ಲಿ ಸಿಸಿ ರಸ್ತೆ, ಒಳಚರಂಡಿ, ತೆರದ ಚರಂಡಿ ಸೇರಿದಂತೆ ₹ 10ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ ಅಬ್ಬಯ್ಯ ಶನಿವಾರ ಚಾಲನೆ ನೀಡಿದರು.</p>.<p>‘ಮಂಟೂರು ರಸ್ತೆಯು ಪೂರ್ವ ಕ್ಷೇತ್ರದಲ್ಲಿ ಅತ್ಯಂತ ಹಿಂದುಳಿದ ಪ್ರದೇಶವಾಗಿತ್ತು. ನಾನು ಶಾಸಕನಾಗುವ ಮೊದಲು ಈ ಭಾಗದಲ್ಲಿ ಸುಸಜ್ಜಿತ ರಸ್ತೆಗಳೇ ಇರಲಿಲ್ಲ. ಜನರು ಓಡಾಡದ ಪರಿಸ್ಥಿತಿ ಇತ್ತು. ಕಳೆದ 10ವರ್ಷದಲ್ಲಿ ಮಂಟೂರು ಭಾಗಕ್ಕೆ ಅಂದಾಜು ₹ 110ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಮಾಡಲಾಗಿದೆ’ ಎಂದರು.</p>.<p>ಶೀಘ್ರದಲ್ಲೇ ಸೂಪರ್ ಮಾರುಕಟ್ಟೆ: ಮಂಟೂರು ಭಾಗದಲ್ಲಿ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಒಂದು ಸುಸಜ್ಜಿತ ಸೂಪರ್ ಮಾರುಕಟ್ಟೆ ನಿರ್ಮಾಣ ಮಾಡುವ ಯೋಜನೆ ಇದೆ. ಮುಂದಿನ ದಿನಗಳಲ್ಲಿ ಸ್ಥಳ ಗುರುತಿಸಲಾಗುವುದು ಎಂದು ಹೇಳಿದರು. </p>.<p>ಪಾಲಿಕೆ ಸದಸ್ಯ ದೊರೆರಾಜ ಮಣಿಕುಂಟ್ಲಾ, ಪಾಲಿಕೆ ಮಾಜಿ ಸದಸ್ಯರಾದ ಸುಧಾ ಮಣಿಕುಂಟ್ಲಾ, ಬರ್ನಾಬಾಸ್ ಕುಡಲಿ, ವಾರ್ಡ್ ಕಾಂಗ್ರೆಸ್ ಅಧ್ಯಕ್ಷರಾದ ಶರೀಫ್ ಅದ್ವಾನಿ, ಕಾಂಗ್ರೆಸ್ ಮುಖಂಡರು, ಸ್ಥಳೀಯರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>