ಹುಬ್ಬಳ್ಳಿ: ಪೂರ್ವ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 62ರ ಮಂಟೂರು ರಸ್ತೆ, ಭಾರತ ಕಾಲೋನಿ-1 ಭಾರತ ಕಾಲೋನಿ-2 ಮತ್ತು ಕೆ.ಬಿ. ನಗರದಲ್ಲಿ ಸಿಸಿ ರಸ್ತೆ, ಒಳಚರಂಡಿ, ತೆರದ ಚರಂಡಿ ಸೇರಿದಂತೆ ₹ 10ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ ಅಬ್ಬಯ್ಯ ಶನಿವಾರ ಚಾಲನೆ ನೀಡಿದರು.