<p><strong>ಹುಬ್ಬಳ್ಳಿ</strong>: ಕೇಂದ್ರ ಸರ್ಕಾರ ನೂತನ ಶಿಕ್ಷಣ ನೀತಿಯನ್ನು ರಾಷ್ಟ್ರೀಯ ಮಟ್ಟದಲ್ಲಿ ಅನುಷ್ಠಾನಕ್ಕೆ ತರುತ್ತಿದ್ದು, ಇದರಲ್ಲಿ ಹಿಂದಿ ಜೊತೆಗೆ ಸ್ಥಳೀಯ ಭಾಷೆ ಕಲಿಕೆಗೂ ಆದ್ಯತೆ ಸಿಗಲಿದೆ ಎಂದು ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಹೇಳಿದರು.</p>.<p>ನವನಗರದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ಸೋಮವಾರ ಭೇಟಿ ನೀಡಿದ ಅವರು ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ದೇಶದ ಸಂವಿಧಾನ ಹಾಗೂ ಕಾನೂನು ವ್ಯವಸ್ಥೆ ಜಗತ್ತಿನಲ್ಲಿಯೇ ಶ್ರೇಷ್ಠವಾದದು. ಇದನ್ನು ಶ್ರೇಷ್ಠವಾಗಿಸುವಲ್ಲಿ ನಮ್ಮೆಲ್ಲರ ಕೊಡುಗೆ ಅಪಾರ’ ಎಂದರು.</p>.<p>‘ಕಾನೂನು ವಿಶ್ವವಿದ್ಯಾಲಯಕ್ಕೆ ಸೌಕರ್ಯಗಳನ್ನು ಹೆಚ್ಚಿಸಲು ಸರ್ಕಾರ ಸಿದ್ಧವಿದೆ. ವಿಶ್ವವಿದ್ಯಾಲಯ ಸುಧಾರಣೆ ಕುರಿತು ಸಿಂಡಿಕೇಟ್ ಸದಸ್ಯರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಮುಕ್ತವಾಗಿ ತಮ್ಮ ಅಭಿಪ್ರಾಯ ಹಂಚಿಕೊಳ್ಳಬಹುದು. ಇವುಗಳ ಕುರಿತು ಸರ್ಕಾರಕ್ಕೆ ಲಿಖಿತವಾಗಿ ಬರೆದು ಬಗೆಹರಿಸುವ ಪ್ರಯತ್ನ ಮಾಡುವುದಾಗಿ’ ಭರವಸೆ ನೀಡಿದರು.</p>.<p>ಸಂವಾದದಲ್ಲಿ ಮಾತನಾಡಿದ ವಿದ್ಯಾರ್ಥಿ ಪ್ರಭೋಯನ್ ಚಕ್ರಬೋರ್ಟಿ ‘ಅಣುಕು ನ್ಯಾಯಾಲಯ ಕಲ್ಪನೆ ವಿದ್ಯಾರ್ಥಿಗಳಗೆ ಅನುಕೂಲವಾಗಿದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ಕಾನೂನು ಜ್ಞಾನ ಲಭಿಸುತ್ತಿದೆ’ ಎಂದರು. ವಿದ್ಯಾರ್ಥಿನಿ ಸಿದ್ಧಿ ನಾಗವೇಕರಿ ನೂತನ ಶಿಕ್ಷಣ ನೀತಿಯಲ್ಲಿನ ತ್ರಿಭಾಷ ಕಲಿಕೆಯ ಅನುಕೂಲತೆಗಳ ಬಗ್ಗೆ ವಾದಿಸಿದರು.</p>.<p>ಸಂವಾದದ ಆರಂಭದಲ್ಲಿ ಥಾವರ್ಚಂದ್ ಗೆಹಲೋತ್ ಅವರು ‘ನಾನು ಮಧ್ಯಪ್ರದೇಶದವನು, ಹಿಂದಿ ಭಾಷಿಕ. ಕರ್ನಾಟಕಕ್ಕೆ ಬಂದ ಮೇಲೆ ಕನ್ನಡ ಕಲಿಯಲು ಪ್ರಯತ್ನಿಸುತ್ತಿದ್ದೇನೆ’ ಎಂದರು.</p>.<p>ಕಾನೂನು ವಿ.ವಿ. ಕುಲಪತಿ ಪ್ರೊ. ಪಿ. ಈಶ್ವರ ಭಟ್, ರಿಜಿಸ್ತ್ರಾರ್ ಮಹಮದ್ ಜುಬೇರ್, ಕುಲಸಚಿವೆ ರತ್ನ ಭರಮಗೌಡರ್, ನೋಂದಣಿ ಹಾಗೂ ಮೌಲ್ಯಮಾಪನ ವಿಭಾಗದ ಪ್ರೊ. ಜಿ.ಬಿ. ಪಾಟೀಲ, ಸಿಂಡಿಕೇಟ್ ಸದಸ್ಯರಾದ ಮಹೇಶ್ ಒಡೆಯರ, ಗಿರಿಜಾ ಹಿರೇಮಠ, ಚಂದ್ರಮೋಹನ್ ಕಾಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಕೇಂದ್ರ ಸರ್ಕಾರ ನೂತನ ಶಿಕ್ಷಣ ನೀತಿಯನ್ನು ರಾಷ್ಟ್ರೀಯ ಮಟ್ಟದಲ್ಲಿ ಅನುಷ್ಠಾನಕ್ಕೆ ತರುತ್ತಿದ್ದು, ಇದರಲ್ಲಿ ಹಿಂದಿ ಜೊತೆಗೆ ಸ್ಥಳೀಯ ಭಾಷೆ ಕಲಿಕೆಗೂ ಆದ್ಯತೆ ಸಿಗಲಿದೆ ಎಂದು ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಹೇಳಿದರು.</p>.<p>ನವನಗರದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ಸೋಮವಾರ ಭೇಟಿ ನೀಡಿದ ಅವರು ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ದೇಶದ ಸಂವಿಧಾನ ಹಾಗೂ ಕಾನೂನು ವ್ಯವಸ್ಥೆ ಜಗತ್ತಿನಲ್ಲಿಯೇ ಶ್ರೇಷ್ಠವಾದದು. ಇದನ್ನು ಶ್ರೇಷ್ಠವಾಗಿಸುವಲ್ಲಿ ನಮ್ಮೆಲ್ಲರ ಕೊಡುಗೆ ಅಪಾರ’ ಎಂದರು.</p>.<p>‘ಕಾನೂನು ವಿಶ್ವವಿದ್ಯಾಲಯಕ್ಕೆ ಸೌಕರ್ಯಗಳನ್ನು ಹೆಚ್ಚಿಸಲು ಸರ್ಕಾರ ಸಿದ್ಧವಿದೆ. ವಿಶ್ವವಿದ್ಯಾಲಯ ಸುಧಾರಣೆ ಕುರಿತು ಸಿಂಡಿಕೇಟ್ ಸದಸ್ಯರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಮುಕ್ತವಾಗಿ ತಮ್ಮ ಅಭಿಪ್ರಾಯ ಹಂಚಿಕೊಳ್ಳಬಹುದು. ಇವುಗಳ ಕುರಿತು ಸರ್ಕಾರಕ್ಕೆ ಲಿಖಿತವಾಗಿ ಬರೆದು ಬಗೆಹರಿಸುವ ಪ್ರಯತ್ನ ಮಾಡುವುದಾಗಿ’ ಭರವಸೆ ನೀಡಿದರು.</p>.<p>ಸಂವಾದದಲ್ಲಿ ಮಾತನಾಡಿದ ವಿದ್ಯಾರ್ಥಿ ಪ್ರಭೋಯನ್ ಚಕ್ರಬೋರ್ಟಿ ‘ಅಣುಕು ನ್ಯಾಯಾಲಯ ಕಲ್ಪನೆ ವಿದ್ಯಾರ್ಥಿಗಳಗೆ ಅನುಕೂಲವಾಗಿದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ಕಾನೂನು ಜ್ಞಾನ ಲಭಿಸುತ್ತಿದೆ’ ಎಂದರು. ವಿದ್ಯಾರ್ಥಿನಿ ಸಿದ್ಧಿ ನಾಗವೇಕರಿ ನೂತನ ಶಿಕ್ಷಣ ನೀತಿಯಲ್ಲಿನ ತ್ರಿಭಾಷ ಕಲಿಕೆಯ ಅನುಕೂಲತೆಗಳ ಬಗ್ಗೆ ವಾದಿಸಿದರು.</p>.<p>ಸಂವಾದದ ಆರಂಭದಲ್ಲಿ ಥಾವರ್ಚಂದ್ ಗೆಹಲೋತ್ ಅವರು ‘ನಾನು ಮಧ್ಯಪ್ರದೇಶದವನು, ಹಿಂದಿ ಭಾಷಿಕ. ಕರ್ನಾಟಕಕ್ಕೆ ಬಂದ ಮೇಲೆ ಕನ್ನಡ ಕಲಿಯಲು ಪ್ರಯತ್ನಿಸುತ್ತಿದ್ದೇನೆ’ ಎಂದರು.</p>.<p>ಕಾನೂನು ವಿ.ವಿ. ಕುಲಪತಿ ಪ್ರೊ. ಪಿ. ಈಶ್ವರ ಭಟ್, ರಿಜಿಸ್ತ್ರಾರ್ ಮಹಮದ್ ಜುಬೇರ್, ಕುಲಸಚಿವೆ ರತ್ನ ಭರಮಗೌಡರ್, ನೋಂದಣಿ ಹಾಗೂ ಮೌಲ್ಯಮಾಪನ ವಿಭಾಗದ ಪ್ರೊ. ಜಿ.ಬಿ. ಪಾಟೀಲ, ಸಿಂಡಿಕೇಟ್ ಸದಸ್ಯರಾದ ಮಹೇಶ್ ಒಡೆಯರ, ಗಿರಿಜಾ ಹಿರೇಮಠ, ಚಂದ್ರಮೋಹನ್ ಕಾಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>