‘ಶಿವಸೇನಾ, ಭಾಷೆ ಹಾಗೂ ಗಡಿ ವಿಚಾರದಲ್ಲಿ ತನ್ನದೇ ಆದ ನಿಲುವು ಹೊಂದಿದೆ. ಕರ್ನಾಟಕದ ನೆಲ, ಜಲ ಹಾಗೂ ಭಾಷೆಯ ವಿಚಾರ ಬಂದಾಗ ಇಲ್ಲಿನ ಶಿವಸೇನಾ ಕಾರ್ಯಕರ್ತರು ಮಹಾರಾಷ್ಟ್ರದ ವಿರುದ್ಧ ಹೋರಾಡುವಂತೆ, ಅಲ್ಲಿನ ಪಕ್ಷದ ಕಾರ್ಯಕರ್ತರು ಕರ್ನಾಟಕದ ವಿರುದ್ಧ ಹೋರಾಟ ಮಾಡುವುದು ಸಹಜ. ಕೊಲ್ಹಾಪುರದಲ್ಲಿ ಶಿವಸೇನಾ ಕಾರ್ಯಕರ್ತರು ಕನ್ನಡಿಗರಿಗೆ ತೊಂದರೆ ಮಾಡಿದರೆ, ನಮ್ಮ ಪಕ್ಷದ ವಿರುದ್ಧವೇ ಹೋರಾಡಲು ನಾವು ಸಿದ್ಧ’ ಎಂದು ಎಚ್ಚರಿಸಿದರು.