ಬೆಂಗಳೂರು: ‘ರೈತರ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಇದೇ 21ರಂದು ಧಾರವಾಡದ ಕಲಾಭವನದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ಸಮಾವೇಶದಲ್ಲಿ ಭೂಸ್ವಾಧೀನ ಕಾಯ್ದೆ, ಬರಗಾಲ, ಸಾಲಮನ್ನಾ, ಸೇರಿದಂತೆ ಅನೇಕ ವಿಚಾರಗಳ ಕುರಿತು ಚರ್ಚೆ ನಡೆಸಲಾಗುವುದು’ ಎಂದರು.