<p>ಧಾರವಾಡ: ‘ರಾಯಾಪುರದ ಕೆಎಲ್ಇ ಶಾಲೆಯಲ್ಲಿ ಆಗಸ್ಟ್ 31ರಿಂದ ಸೆಪ್ಪೆಂಬರ್ 1ರವರೆಗೆ ಮಾದರಿ ವಿಶ್ವಸಂಸ್ಥೆ ಸಮ್ಮೇಳನ’ ನಡೆಯಲಿದೆ ಎಂದು ಪ್ರಾಚಾರ್ಯೆ ಶುಭಾಂಗಿ ಮೋರೆ ತಿಳಿಸಿದರು.</p>.<p>ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎರಡೂ ದಿನ ಬೆಳಿಗ್ಗೆ 8.30ರಿಂದ ಸಂಜೆ 6 ಗಂಟೆವರೆಗೆ ಸಮ್ಮೇಳನ ನಡೆಯಲಿದೆ. ಉದ್ಯಮಿ ಹಿಮಾಂಶು ಕೊಠಾರಿ ಉದ್ಘಾಟಿಸುವರು. ಐಐಟಿ ಪ್ರಾಧ್ಯಾಪಕ ಸುಭಾಷ್ ಪಾಲ್ಗೊಳ್ಳುವರು. ಒಟ್ಟು 380 ವಿದ್ಯಾರ್ಥಿಗಳು ಭಾಗವಹಿಸುವರು’ ಎಂದರು.</p>.<p>‘ವಿಶ್ವಸಂಸ್ಥೆಯ ಮಾದರಿಯಲ್ಲಿ ಒಂಬತ್ತು ಸಮಿತಿ ರಚಿಸಲಾಗಿದೆ. ಸಮ್ಮೇಳನವನ್ನು ವಿದ್ಯಾರ್ಥಿಗಳೇ ನಿರ್ವಹಿಸುತ್ತಾರೆ. ವಿವಿಧ ಸ್ಪರ್ಧೆಗಳು ನಡೆಯುತ್ತವೆ. ಅಂತರರಾಷ್ಟ್ರೀಯ ಮಟ್ಟದ ಪ್ರಚಲಿತ ವಿದ್ಯಮಾನಗಳ ಕುರಿತು ವಿದ್ಯಾರ್ಥಿಗಳು ವಿಷಯ ಮಂಡಿಸುವರು. ಅಂತರರಾಷ್ಟ್ರೀಯ ಸಂಸ್ಥೆಗಳ ಕಾರ್ಯ ವಿಧಾನ ತಿಳಿದುಕೊಳ್ಳಲು, ನಾಯಕತ್ವ ಮೈಗೂಡಿಸಿಕೊಳ್ಳಲು ಸಮ್ಮೇಳನ ಸಹಕಾರಿಯಾಗಲಿದೆ’ ಎಂದರು. </p>.<p>ಧಾರವಾಡ ರೋಟರಿ ಕ್ಲಬ್ ಸೆಂಟ್ರಲ್ ಅಧ್ಯಕ್ಷ ಕರಣ ದೊಡವಾಡ, ಮಹೇಶ್ವರಿ ಸೊಬರದ, ವಿದ್ಯಾರ್ಥಿಗಳಾದ ಸೂರ್ಯಾಕ್ಷ ಅಕಳವಾಡಿ, ಹರ್ಷದ್ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ರಾಯಾಪುರದ ಕೆಎಲ್ಇ ಶಾಲೆಯಲ್ಲಿ ಆಗಸ್ಟ್ 31ರಿಂದ ಸೆಪ್ಪೆಂಬರ್ 1ರವರೆಗೆ ಮಾದರಿ ವಿಶ್ವಸಂಸ್ಥೆ ಸಮ್ಮೇಳನ’ ನಡೆಯಲಿದೆ ಎಂದು ಪ್ರಾಚಾರ್ಯೆ ಶುಭಾಂಗಿ ಮೋರೆ ತಿಳಿಸಿದರು.</p>.<p>ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎರಡೂ ದಿನ ಬೆಳಿಗ್ಗೆ 8.30ರಿಂದ ಸಂಜೆ 6 ಗಂಟೆವರೆಗೆ ಸಮ್ಮೇಳನ ನಡೆಯಲಿದೆ. ಉದ್ಯಮಿ ಹಿಮಾಂಶು ಕೊಠಾರಿ ಉದ್ಘಾಟಿಸುವರು. ಐಐಟಿ ಪ್ರಾಧ್ಯಾಪಕ ಸುಭಾಷ್ ಪಾಲ್ಗೊಳ್ಳುವರು. ಒಟ್ಟು 380 ವಿದ್ಯಾರ್ಥಿಗಳು ಭಾಗವಹಿಸುವರು’ ಎಂದರು.</p>.<p>‘ವಿಶ್ವಸಂಸ್ಥೆಯ ಮಾದರಿಯಲ್ಲಿ ಒಂಬತ್ತು ಸಮಿತಿ ರಚಿಸಲಾಗಿದೆ. ಸಮ್ಮೇಳನವನ್ನು ವಿದ್ಯಾರ್ಥಿಗಳೇ ನಿರ್ವಹಿಸುತ್ತಾರೆ. ವಿವಿಧ ಸ್ಪರ್ಧೆಗಳು ನಡೆಯುತ್ತವೆ. ಅಂತರರಾಷ್ಟ್ರೀಯ ಮಟ್ಟದ ಪ್ರಚಲಿತ ವಿದ್ಯಮಾನಗಳ ಕುರಿತು ವಿದ್ಯಾರ್ಥಿಗಳು ವಿಷಯ ಮಂಡಿಸುವರು. ಅಂತರರಾಷ್ಟ್ರೀಯ ಸಂಸ್ಥೆಗಳ ಕಾರ್ಯ ವಿಧಾನ ತಿಳಿದುಕೊಳ್ಳಲು, ನಾಯಕತ್ವ ಮೈಗೂಡಿಸಿಕೊಳ್ಳಲು ಸಮ್ಮೇಳನ ಸಹಕಾರಿಯಾಗಲಿದೆ’ ಎಂದರು. </p>.<p>ಧಾರವಾಡ ರೋಟರಿ ಕ್ಲಬ್ ಸೆಂಟ್ರಲ್ ಅಧ್ಯಕ್ಷ ಕರಣ ದೊಡವಾಡ, ಮಹೇಶ್ವರಿ ಸೊಬರದ, ವಿದ್ಯಾರ್ಥಿಗಳಾದ ಸೂರ್ಯಾಕ್ಷ ಅಕಳವಾಡಿ, ಹರ್ಷದ್ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>