‘ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಬೆಳಗ್ಗೆ ಸಿದ್ಧಪ್ಪಜ್ಜರ ಗದ್ದುಗೆಗೆ ರುದ್ರಾಭಿಷೇಕ ಹಾಗೂ ಮಹಾಪೂಜೆ ಜರುಗಲಿದೆ. ನಂತರ 10.30ಕ್ಕೆ ಹುಬ್ಬಳ್ಳಿಯ ರುದ್ರಾಕ್ಷಿಮಠದ ಬಸವಲಿಂಗ ಮಹಾಸ್ವಾಮೀಜಿ ಅಧ್ಯಕ್ಷತೆಯಲ್ಲಿ, ಉಣಕಲ್ನ ಗುರುಸಿದ್ದಯ್ಯ ಹಿರೇಮಠ ಹಾಗೂ ಸವಣೂರಿನ ಮಹಾಂತಯ್ಯ ಸ್ವಾಮಿ ಹಿರೇಮಠ ಪೌರೋಹಿತ್ಯದಲ್ಲಿ ಸಾಮೂಹಿಕ ವಿವಾಹ ನಡೆಯಲಿವೆ. ರಾತ್ರಿ 10 ಗಂಟೆಗೆ ದುರ್ಗಾದೇವಿ ಗುಡಿ ಬಯಲಿನಲ್ಲಿ ಸಂಗೀತ ಕಾರ್ಯಕ್ರಮ ಜರುಗಲಿದೆ’ ಎಂದು ತಿಳಿಸಿದರು.