<p><strong>ಹುಬ್ಬಳ್ಳಿ: ಕ</strong>ಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನಡೆದ ಅವ್ಯವಹಾರದ ವಿರುದ್ಧ ಮುಂದಿನ ಹೋರಾಟ ರೂಪಿಸಲು ಅಖಿಲ ಭಾರತ ಸಂಯುಕ್ತ ಕಾರ್ಮಿಕ ಸಂಘಟನೆಗಳ ಒಕ್ಕೂಟದ (ಎಐಯುಟಿಯುಸಿ) ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘವು ಜುಲೈ 9ರಂದು ಧಾರವಾಡದಲ್ಲಿ ರಾಜ್ಯಮಟ್ಟದ ಸಮ್ಮೇಳನ ಆಯೋಜಿಸಿದೆ.</p>.<p>‘ಸಮ್ಮೇಳನಕ್ಕೆ ಮುನ್ನ ಮೆರವಣಿಗೆ ನಡೆಯಲಿದೆ. ಸರ್ಕಾರಿ ನೌಕರರ ಭವನದಲ್ಲಿ ನಡೆಯುವ ಪ್ರತಿನಿಧಿ ಅಧಿವೇಶನದಲ್ಲಿ 20 ಜಿಲ್ಲೆಗಳ 200 ಪ್ರತಿನಿಧಿಗಳು ಭಾಗವಹಿಸುವರು. ನಂತರ ಬಹಿರಂಗ ಅಧಿವೇಶನ ಜರುಗಲಿದೆ’ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೆ. ಸೋಮಶೇಖರ್ ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಕಟ್ಟಡ ಕಾರ್ಮಿಕರ ಬೋಗಸ್ ಕಾರ್ಡ್ಗಳನ್ನು ರದ್ದುಗೊಳಿಸುವ ಪ್ರಕ್ರಿಯೆಯಲ್ಲಿ ನಿಜವಾದ ಕಾರ್ಮಿಕರ ಕಾರ್ಡ್ಗಳನ್ನೂ ರದ್ದುಪಡಿಸಲಾಗಿದೆ. ಇದೇ ನೆಪದಲ್ಲಿ ಸೌಲಭ್ಯಗಳನ್ನು ಕಡಿತ ಮಾಡಲಾಗಿದೆ. ಆನ್ಲೈನ್ ಮೂಲಕ ಕಾರ್ಡ್ ನವೀಕರಣಕ್ಕೆ ಅರ್ಜಿ ಸಲ್ಲಿಸುವುದು ತ್ರಾಸದಾಯಕವಾಗಿದೆ. ಮಂಡಳಿಯ ಭ್ರಷ್ಟಾಚಾರ, ಹಣದ ಪೋಲು ತಡೆಯುವುದರೊಂದಿಗೆ ಈ ಕುರಿತು ತನಿಖೆ ಸಮಗ್ರ ನಡೆಸಬೇಕು ಎಂಬುದು ಸೇರಿ ವಿವಿಧ ವಿಷಯಗಳನ್ನು ಚರ್ಚಿಸಲಾಗುವುದು’ ಎಂದರು.</p>.<p>ಸಂಘದ ಕಾರ್ಯದರ್ಶಿ ಎ. ದೇವದಾಸ್, ಗಂಗಾಧರ ಬಡಿಗೇರ, ಎಂ.ಬಿ. ತಾಯದಾಸ್, ಯೋಗಪ್ಪ ಜೋತೆಪ್ಪನವರ, ಅಲ್ಲಾಭಕ್ಷ ಕಿತ್ತೂರ, ಹಸ್ಮೀನ್ಖಾನ್ ರಾಟೀಮನಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: ಕ</strong>ಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನಡೆದ ಅವ್ಯವಹಾರದ ವಿರುದ್ಧ ಮುಂದಿನ ಹೋರಾಟ ರೂಪಿಸಲು ಅಖಿಲ ಭಾರತ ಸಂಯುಕ್ತ ಕಾರ್ಮಿಕ ಸಂಘಟನೆಗಳ ಒಕ್ಕೂಟದ (ಎಐಯುಟಿಯುಸಿ) ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘವು ಜುಲೈ 9ರಂದು ಧಾರವಾಡದಲ್ಲಿ ರಾಜ್ಯಮಟ್ಟದ ಸಮ್ಮೇಳನ ಆಯೋಜಿಸಿದೆ.</p>.<p>‘ಸಮ್ಮೇಳನಕ್ಕೆ ಮುನ್ನ ಮೆರವಣಿಗೆ ನಡೆಯಲಿದೆ. ಸರ್ಕಾರಿ ನೌಕರರ ಭವನದಲ್ಲಿ ನಡೆಯುವ ಪ್ರತಿನಿಧಿ ಅಧಿವೇಶನದಲ್ಲಿ 20 ಜಿಲ್ಲೆಗಳ 200 ಪ್ರತಿನಿಧಿಗಳು ಭಾಗವಹಿಸುವರು. ನಂತರ ಬಹಿರಂಗ ಅಧಿವೇಶನ ಜರುಗಲಿದೆ’ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೆ. ಸೋಮಶೇಖರ್ ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಕಟ್ಟಡ ಕಾರ್ಮಿಕರ ಬೋಗಸ್ ಕಾರ್ಡ್ಗಳನ್ನು ರದ್ದುಗೊಳಿಸುವ ಪ್ರಕ್ರಿಯೆಯಲ್ಲಿ ನಿಜವಾದ ಕಾರ್ಮಿಕರ ಕಾರ್ಡ್ಗಳನ್ನೂ ರದ್ದುಪಡಿಸಲಾಗಿದೆ. ಇದೇ ನೆಪದಲ್ಲಿ ಸೌಲಭ್ಯಗಳನ್ನು ಕಡಿತ ಮಾಡಲಾಗಿದೆ. ಆನ್ಲೈನ್ ಮೂಲಕ ಕಾರ್ಡ್ ನವೀಕರಣಕ್ಕೆ ಅರ್ಜಿ ಸಲ್ಲಿಸುವುದು ತ್ರಾಸದಾಯಕವಾಗಿದೆ. ಮಂಡಳಿಯ ಭ್ರಷ್ಟಾಚಾರ, ಹಣದ ಪೋಲು ತಡೆಯುವುದರೊಂದಿಗೆ ಈ ಕುರಿತು ತನಿಖೆ ಸಮಗ್ರ ನಡೆಸಬೇಕು ಎಂಬುದು ಸೇರಿ ವಿವಿಧ ವಿಷಯಗಳನ್ನು ಚರ್ಚಿಸಲಾಗುವುದು’ ಎಂದರು.</p>.<p>ಸಂಘದ ಕಾರ್ಯದರ್ಶಿ ಎ. ದೇವದಾಸ್, ಗಂಗಾಧರ ಬಡಿಗೇರ, ಎಂ.ಬಿ. ತಾಯದಾಸ್, ಯೋಗಪ್ಪ ಜೋತೆಪ್ಪನವರ, ಅಲ್ಲಾಭಕ್ಷ ಕಿತ್ತೂರ, ಹಸ್ಮೀನ್ಖಾನ್ ರಾಟೀಮನಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>