<p>ಹುಬ್ಬಳ್ಳಿ: ‘ಪರಿಶಿಷ್ಟ ಜಾತಿ ಒಳಮೀಸಲಾತಿ ವಿರೋಧಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಕೆ ಹಾಗೂ ದೇಶವ್ಯಾಪಿ ಹೋರಾಟಕ್ಕೆ ರಾಜ್ಯ ಕೊರಮ, ಕೊರಚ, ಭೋವಿ, ಬಂಜಾರ ಮೀಸಲಾತಿ ಸಂರಕ್ಷಣಾ ಹೋರಾಟ ಸಮಿತಿ ನಿರ್ಧರಿಸಿದೆ’ ಎಂದು ಸಮಿತಿ ಮುಖಂಡ ಪಾಂಡುರಂಗ ಪಮ್ಮಾರ ಹೇಳಿದರು.</p>.<p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೇಲ್ಮನವಿ ಸ್ವೀಕಾರವಾಗಿದ್ದು, 9 ನ್ಯಾಯಾಧೀಶರ ಪೀಠದ ಮುಂದೆ ಶೀಘ್ರವೇ ವಿಚಾರಣೆಗೆ ಬರಲಿದೆ. ಸುಪ್ರೀಂಕೋರ್ಟ್ ಒಳ ಮೀಸಲಾತಿಗೆ ಸಹಮತ ವ್ಯಕ್ತಪಡಿಸಿರುವುದು ಸರಿಯಲ್ಲ. ನ್ಯಾಯಾಲಯದ ಅಭಿಪ್ರಾಯ ಸ್ವಾಗತಿಸಿ ಆ. 14ರಂದು ಹುಬ್ಬಳ್ಳಿಯಲ್ಲಿ ಆಯೋಜಿಸಿರುವ ಮಾದಿಗರ ವಿಜಯೋತ್ಸವದಲ್ಲಿ ನಮ್ಮ ಸಂಘಟನೆ ಪಾಲ್ಗೊಳ್ಳುತ್ತಿಲ್ಲ’ ಎಂದರು.</p>.<p>‘ಒಳಮೀಸಲಾತಿ ಜಾರಿಯಾದರೆ ಮುಂದಿನ ಪೀಳಿಗೆಗೆ ಅನ್ಯಾಯವಾಗಲಿದೆ. ಈ ಕುರಿತು ಪರಿಶಿಷ್ಟ ಜಾತಿಯ ನಾಯಕರು ಹಾಗೂ ಕಾನೂನು ತಜ್ಞರ ಜೊತೆ ಸಮಾಲೋಚಿಸಿ ಕ್ರಮ ಕೈಗೊಳ್ಳುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದು ಸ್ವಾಗತಾರ್ಹ’ ಎಂದು ಹೇಳಿದರು.</p>.<p>ಪ್ರಕಾಶ ಕ್ಯಾರಕಟ್ಟಿ, ಶಶಿಕಾಂತ ಬಿಜವಾಡ, ಸುಭಾಸ ಮಲ್ಲಾಡದ, ಶಿವಾನಂದ ಕೊಣ್ಣೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ‘ಪರಿಶಿಷ್ಟ ಜಾತಿ ಒಳಮೀಸಲಾತಿ ವಿರೋಧಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಕೆ ಹಾಗೂ ದೇಶವ್ಯಾಪಿ ಹೋರಾಟಕ್ಕೆ ರಾಜ್ಯ ಕೊರಮ, ಕೊರಚ, ಭೋವಿ, ಬಂಜಾರ ಮೀಸಲಾತಿ ಸಂರಕ್ಷಣಾ ಹೋರಾಟ ಸಮಿತಿ ನಿರ್ಧರಿಸಿದೆ’ ಎಂದು ಸಮಿತಿ ಮುಖಂಡ ಪಾಂಡುರಂಗ ಪಮ್ಮಾರ ಹೇಳಿದರು.</p>.<p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೇಲ್ಮನವಿ ಸ್ವೀಕಾರವಾಗಿದ್ದು, 9 ನ್ಯಾಯಾಧೀಶರ ಪೀಠದ ಮುಂದೆ ಶೀಘ್ರವೇ ವಿಚಾರಣೆಗೆ ಬರಲಿದೆ. ಸುಪ್ರೀಂಕೋರ್ಟ್ ಒಳ ಮೀಸಲಾತಿಗೆ ಸಹಮತ ವ್ಯಕ್ತಪಡಿಸಿರುವುದು ಸರಿಯಲ್ಲ. ನ್ಯಾಯಾಲಯದ ಅಭಿಪ್ರಾಯ ಸ್ವಾಗತಿಸಿ ಆ. 14ರಂದು ಹುಬ್ಬಳ್ಳಿಯಲ್ಲಿ ಆಯೋಜಿಸಿರುವ ಮಾದಿಗರ ವಿಜಯೋತ್ಸವದಲ್ಲಿ ನಮ್ಮ ಸಂಘಟನೆ ಪಾಲ್ಗೊಳ್ಳುತ್ತಿಲ್ಲ’ ಎಂದರು.</p>.<p>‘ಒಳಮೀಸಲಾತಿ ಜಾರಿಯಾದರೆ ಮುಂದಿನ ಪೀಳಿಗೆಗೆ ಅನ್ಯಾಯವಾಗಲಿದೆ. ಈ ಕುರಿತು ಪರಿಶಿಷ್ಟ ಜಾತಿಯ ನಾಯಕರು ಹಾಗೂ ಕಾನೂನು ತಜ್ಞರ ಜೊತೆ ಸಮಾಲೋಚಿಸಿ ಕ್ರಮ ಕೈಗೊಳ್ಳುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದು ಸ್ವಾಗತಾರ್ಹ’ ಎಂದು ಹೇಳಿದರು.</p>.<p>ಪ್ರಕಾಶ ಕ್ಯಾರಕಟ್ಟಿ, ಶಶಿಕಾಂತ ಬಿಜವಾಡ, ಸುಭಾಸ ಮಲ್ಲಾಡದ, ಶಿವಾನಂದ ಕೊಣ್ಣೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>