<p><strong>ಕಲಘಟಗಿ:</strong> ‘ಪ್ರಧಾನಿ ಮೋದಿ ಅವರಿಗೆ ಬೈದರೆ ತಾವು ದೊಡ್ಡವರು ಆಗುತ್ತೇವೆ ಎಂದು ಸಚಿವ ಲಾಡ್ ಅಂದುಕೊಂಡಿದ್ದಾರೆ. ಆದರೆ ಆಕಾಶಕ್ಕೆ ಉಗುಳಿದರೆ ನಮ್ಮ ಮೇಲೆ ಸಿಡಿಯುತ್ತದೆ ಎಂಬ ಅರಿವು ಅವರಿಗಿಲ್ಲ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಲಾಡ್ ವಿರುದ್ದ ಕಿಡಿಕಾರಿದರು.</p>.<p>ತಾಲ್ಲೂಕಿನ ಮಿಶ್ರಿಕೋಟಿ ಹಾಗೂ ಕಲಘಟಗಿ ಪಟ್ಟಣದಲ್ಲಿ ಭಾನುವಾರ ಆಯೋಜಿಸಿದ್ದ ರೋಡ್ ಶೋ ಮೂಲಕ ಮತಯಾಚನೆ ಮಾಡಿ ನಂತರ ಆಂಜನೇಯ ವೃತ್ತದಲ್ಲಿ ನಡೆದ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.</p>.<p>ಜನರಿಗಾಗಿ ಪ್ರಧಾನಿ ಮೋದಿಯವರು ಆಯುಷ್ಮಾನ ಭಾರತ, ಪಿಎಂ ಕಿಸಾನ್, ಪಿಎಂ ಆವಾಸ್, ಮುದ್ರಾ, ಉಜ್ವಲ , ವಿಶ್ವಕರ್ಮದಂತಹ ಹಲವಾರು ಯೋಜನೆಗಳನ್ನು ತಂದು ಮುನ್ನಡೆಸಿದ್ದಾರೆ ಎಂದರು. </p>.<p>‘ನಾನು ಕೂಡಾ ನೂರಾರು ಸರ್ಕಾರಿ ಶಾಲೆಗಳ ಅಭಿವೃದ್ಧಿ, ಶಾಲೆ ಕೊಠಡಿಗಳ ನಿರ್ಮಾಣ, ರಸ್ತೆ ಅಭಿವೃದ್ಧಿ ಇನ್ನು ಹಲವು ಅಭಿವೃದ್ಧಿ ಕಾಮಗಾರಿ ಮಾಡಿದ್ದೇನೆ’ ಎಂದು ಹೇಳಿದರು.</p>.<p>ಬಿಜೆಪಿ ಮುಖಂಡರಾದ ನಾಗರಾಜ ಛಬ್ಬಿ ,ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ನಿಂಗಪ್ಪ ಸುತಗಟ್ಟಿ, ಶಶಿಧರ್ ನಿಂಬಣ್ಣವರ, ಈರಣ್ಣ ಜಡಿ, ಮಹಾಂತೇಶ ತಹಶೀಲ್ದಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಘಟಗಿ:</strong> ‘ಪ್ರಧಾನಿ ಮೋದಿ ಅವರಿಗೆ ಬೈದರೆ ತಾವು ದೊಡ್ಡವರು ಆಗುತ್ತೇವೆ ಎಂದು ಸಚಿವ ಲಾಡ್ ಅಂದುಕೊಂಡಿದ್ದಾರೆ. ಆದರೆ ಆಕಾಶಕ್ಕೆ ಉಗುಳಿದರೆ ನಮ್ಮ ಮೇಲೆ ಸಿಡಿಯುತ್ತದೆ ಎಂಬ ಅರಿವು ಅವರಿಗಿಲ್ಲ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಲಾಡ್ ವಿರುದ್ದ ಕಿಡಿಕಾರಿದರು.</p>.<p>ತಾಲ್ಲೂಕಿನ ಮಿಶ್ರಿಕೋಟಿ ಹಾಗೂ ಕಲಘಟಗಿ ಪಟ್ಟಣದಲ್ಲಿ ಭಾನುವಾರ ಆಯೋಜಿಸಿದ್ದ ರೋಡ್ ಶೋ ಮೂಲಕ ಮತಯಾಚನೆ ಮಾಡಿ ನಂತರ ಆಂಜನೇಯ ವೃತ್ತದಲ್ಲಿ ನಡೆದ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.</p>.<p>ಜನರಿಗಾಗಿ ಪ್ರಧಾನಿ ಮೋದಿಯವರು ಆಯುಷ್ಮಾನ ಭಾರತ, ಪಿಎಂ ಕಿಸಾನ್, ಪಿಎಂ ಆವಾಸ್, ಮುದ್ರಾ, ಉಜ್ವಲ , ವಿಶ್ವಕರ್ಮದಂತಹ ಹಲವಾರು ಯೋಜನೆಗಳನ್ನು ತಂದು ಮುನ್ನಡೆಸಿದ್ದಾರೆ ಎಂದರು. </p>.<p>‘ನಾನು ಕೂಡಾ ನೂರಾರು ಸರ್ಕಾರಿ ಶಾಲೆಗಳ ಅಭಿವೃದ್ಧಿ, ಶಾಲೆ ಕೊಠಡಿಗಳ ನಿರ್ಮಾಣ, ರಸ್ತೆ ಅಭಿವೃದ್ಧಿ ಇನ್ನು ಹಲವು ಅಭಿವೃದ್ಧಿ ಕಾಮಗಾರಿ ಮಾಡಿದ್ದೇನೆ’ ಎಂದು ಹೇಳಿದರು.</p>.<p>ಬಿಜೆಪಿ ಮುಖಂಡರಾದ ನಾಗರಾಜ ಛಬ್ಬಿ ,ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ನಿಂಗಪ್ಪ ಸುತಗಟ್ಟಿ, ಶಶಿಧರ್ ನಿಂಬಣ್ಣವರ, ಈರಣ್ಣ ಜಡಿ, ಮಹಾಂತೇಶ ತಹಶೀಲ್ದಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>