ಅಣ್ಣಿಗೇರಿ: ತಾಲ್ಲೂಕಿನ ಇಬ್ರಾಹಿಂಪೂರ ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಈಚೆಗೆ ನಡೆಯಿತು. ತಹಶೀಲ್ದಾರ್ ಭ್ರಮರಾಂಬ ಗುಬ್ಬಿಶಟ್ಟಿ ಉದ್ಘಾಟಿಸಿದರು.
ಗ್ರಾಮದಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ದಿ ಕಾರ್ಯಗಳು ನಡೆದಿವೆ. ರಸ್ತೆ, ಚರಂಡಿ ಹಾಗೂ ಶೌಚಾಲಯ ನಿರ್ಮಾಣಕ್ಕೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ತಹಶೀಲ್ದಾರ್ ತಿಳಿಸಿದರು.
ಬಸ್ ಸೌಕರ್ಯ ಸಮಸ್ಯೆಗೆ ಸಂಬಂಧಿಸಿ ಆದಷ್ಟು ಬೇಗ ಪರಿಹಾರ ಕಂಡುಕೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕಂದಾಯ ಇಲಾಖೆಗೆ ಸಂಬಂಧಿಸಿದ 15 ಅರ್ಜಿಗಳು, ಮಾಸಾಶನಕ್ಕೆ ಸಂಬಂಧಿ ಸಿದ 10 ಹಾಗೂ ಗ್ರಾಮ ಪಂಚಾಯ್ತಿಗೆ ಸಂಬಂಧಿಸಿಗೆ 25 ಅರ್ಜಿಗಳು ಸೇರಿದಂತೆ ಸಾರ್ವಜನಿಕರಿಂದ 50ಕ್ಕೂ ಹೆಚ್ಚು ಅರ್ಜಿಗಳು ಬಂದವು.
ಸಂಜೀವಕುಮಾರ ಗುಡಿಮನಿ, ಅರುಣ ಕರಿಶಂಕರಿ, ಎಂ.ಎಸ್.ಪಾಟೀಲ, ಕೆ.ಎಸ್.ಪಾಟೀಲ ಸೇರಿದಂತೆ ತಾಲ್ಲೂಕು ಮಟ್ಟದ ಎಲ್ಲ ಇಲಾಖೆ ಅಧಿಕಾರಿಗಳು ಇದ್ದರು.