<p><strong>ಹುಬ್ಬಳ್ಳಿ</strong>: ‘ನೈರುತ್ಯ ರೈಲ್ವೆಯು ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದೆ. 2021-22ರ ಅವಧಿಯಲ್ಲಿ 187 ಕಿ.ಮೀ. ದ್ವಿಪಥಿಕರಣ, 22 ಕಿ.ಮೀ. ಹೊಸ ಮಾರ್ಗಗಳು ಹಾಗೂ 511.7 ಕಿ.ಮೀ. ವಿದ್ಯುದ್ದೀಕರಣ ಪೂರ್ಣಗೊಳಿಸಲಾಗಿದೆ’ ಎಂದು ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ಹೇಳಿದರು.</p>.<p>ನಗರದಲ್ಲಿ ಶುಕ್ರವಾರ ಇಲಾಖೆಯ ಹುಬ್ಬಳ್ಳಿ, ಬೆಂಗಳೂರು, ಮೈಸೂರು ವಿಭಾಗಗಳ ಪ್ರಧಾನ ಮುಖ್ಯಸ್ಥರು ಹಾಗೂ ವಿಭಾಗೀಯ ರೈಲ್ವೆ ವ್ಯವಸ್ಥಾಪಕರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ನಿವ್ವಳ ಶೂನ್ಯ ಇಂಗಾಲದ ಹೊರಸೂಸುವಿಕೆಯನ್ನು ಸಾಧಿಸುವ ನಿಟ್ಟಿನಲ್ಲಿ, 2021-22ನೇ ಹಣಕಾಸು ವರ್ಷದಲ್ಲಿ 26 ರೈಲುಗಳ ಸಂಚಾರವನ್ನು ಎಲೆಕ್ಟ್ರಿಕ್ ಟ್ರಾಕ್ಷನ್ಗೆ ಪರಿವರ್ತಿಸಲಾಗಿದೆ’ ಎಂದರು.</p>.<p>‘ಡೀಸೆಲ್ ಬಳಕೆ ತಗ್ಗಿಸುವುದಕ್ಕಾಗಿ 40 ರೈಲುಗಳು ಎಚ್ಒಜಿ ಪವರ್ ಕಾರ್ಗಳಲ್ಲಿ ಸಂಚರಿಸುತ್ತಿವೆ. ಹಸಿರು ಅಭಿಯಾನದ ಉಪಕ್ರಮವಾಗಿ, ವಿವಿಧ ಜಾತಿಯ70 ಸಾವಿರ ಸಸಿಗಳನ್ನು ನೆಡಲಾಗಿದೆ. ಸರಕು ಸಾಗಾಟ, ಗುಜರಿ ವಸ್ತುಗಳ ಮಾರಾಟ ಸೇರಿದಂತೆ ವಿವಿಧ ಮೂಲಗಳಿಂದ ಬರುವ ಆದಾಯವು ಏರಿಕೆಯಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ನೈರುತ್ಯ ರೈಲ್ವೆಯು ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದೆ. 2021-22ರ ಅವಧಿಯಲ್ಲಿ 187 ಕಿ.ಮೀ. ದ್ವಿಪಥಿಕರಣ, 22 ಕಿ.ಮೀ. ಹೊಸ ಮಾರ್ಗಗಳು ಹಾಗೂ 511.7 ಕಿ.ಮೀ. ವಿದ್ಯುದ್ದೀಕರಣ ಪೂರ್ಣಗೊಳಿಸಲಾಗಿದೆ’ ಎಂದು ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ಹೇಳಿದರು.</p>.<p>ನಗರದಲ್ಲಿ ಶುಕ್ರವಾರ ಇಲಾಖೆಯ ಹುಬ್ಬಳ್ಳಿ, ಬೆಂಗಳೂರು, ಮೈಸೂರು ವಿಭಾಗಗಳ ಪ್ರಧಾನ ಮುಖ್ಯಸ್ಥರು ಹಾಗೂ ವಿಭಾಗೀಯ ರೈಲ್ವೆ ವ್ಯವಸ್ಥಾಪಕರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ನಿವ್ವಳ ಶೂನ್ಯ ಇಂಗಾಲದ ಹೊರಸೂಸುವಿಕೆಯನ್ನು ಸಾಧಿಸುವ ನಿಟ್ಟಿನಲ್ಲಿ, 2021-22ನೇ ಹಣಕಾಸು ವರ್ಷದಲ್ಲಿ 26 ರೈಲುಗಳ ಸಂಚಾರವನ್ನು ಎಲೆಕ್ಟ್ರಿಕ್ ಟ್ರಾಕ್ಷನ್ಗೆ ಪರಿವರ್ತಿಸಲಾಗಿದೆ’ ಎಂದರು.</p>.<p>‘ಡೀಸೆಲ್ ಬಳಕೆ ತಗ್ಗಿಸುವುದಕ್ಕಾಗಿ 40 ರೈಲುಗಳು ಎಚ್ಒಜಿ ಪವರ್ ಕಾರ್ಗಳಲ್ಲಿ ಸಂಚರಿಸುತ್ತಿವೆ. ಹಸಿರು ಅಭಿಯಾನದ ಉಪಕ್ರಮವಾಗಿ, ವಿವಿಧ ಜಾತಿಯ70 ಸಾವಿರ ಸಸಿಗಳನ್ನು ನೆಡಲಾಗಿದೆ. ಸರಕು ಸಾಗಾಟ, ಗುಜರಿ ವಸ್ತುಗಳ ಮಾರಾಟ ಸೇರಿದಂತೆ ವಿವಿಧ ಮೂಲಗಳಿಂದ ಬರುವ ಆದಾಯವು ಏರಿಕೆಯಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>