‘ಒಳರೋಗಿಗಳು ಹಾಗೂ ಹೊರ ರೋಗಿಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಆದರೆ, ಆಸ್ಪತ್ರೆಯ ನಿರ್ವಹಣಾ ವೆಚ್ಚ ಅಷ್ಟೇ ಇದೆ. ಹಾಗಾಗಿ, ಆಸ್ಪತ್ರೆಗಳ ಆಡಳಿತ ಮಂಡಳಿಗಳಿಗೆ ಆರ್ಥಿಕವಾಗಿ ಹೊರೆಯಾಗುತ್ತಿದೆ. ಎಲ್ಲ ಕ್ಷೇತ್ರಗಳೂ ಇಂತಹ ಬಿಕ್ಕಟ್ಟು ಎದುರಿಸುತ್ತಿವೆ’ ಎನ್ನುತ್ತಾರೆ ಹುಬ್ಬಳ್ಳಿಯ ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಕ್ರಾಂತಿಕಿರಣ.