ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಕಾಶ್ಮೀರದ ಮೂವರು ಆರೋಪಿಗಳನ್ನು ಬುಧವಾರ ಇಲ್ಲಿಯ ಐದನೇ ಹೆಚ್ಚುವರಿ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರು ಪಡಿಸಲಾಯಿತು.
ಆರೋಪಿ ಪರ ಬೆಂಗಳೂರಿನ ವಕೀಲ ಬಸವರಾಜ ಹಾಗೂ ಸರ್ಕಾರದ ಪರ ಸುಮಿತ್ರಾ ಅಂಚಟಗೇರಿ ವಾದ ಮಂಡಿಸಿದರು. ವಾದ ಆಲಿಸಿದ ನ್ಯಾಯಾಧೀಶ ಕೆ.ಎನ್. ಗಂಗಾಧರ, ವಿಡಿಯೊ ಕಾನ್ಫರೆನ್ಸ್ ಮೂಲಕ ಏ. 15ಕ್ಕೆ ವಿಚಾರಣೆ ನಡೆಸುವುದಾಗಿ ಮುಂದೂಡಿದರು.
ಶರತ್ತು ಬದ್ಧ ಜಾಮೀನಿನೊಂದಿಗೆ ಬೆಂಗಳೂರಿನಲ್ಲಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳನ್ನು ಬಿಗಿ ಬಂದೋಬಸ್ತ್ನಲ್ಲಿ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ನ್ಯಾಯಾಲಯದ ಆವರಣದಲ್ಲಿ ಪೊಲೀಸ್ ಭದ್ರತೆ ಹಾಕಲಾಗಿತ್ತು.