‘ಪಂಚಮಸಾಲಿ ಸಮಾಜವನ್ನು ರಾಜ್ಯ ಸರ್ಕಾರ ’2ಎ’ಗೆ ಸೇರ್ಪಡೆ ಮಾಡಬೇಕು ಎಂದು ಹಕ್ಕೊತ್ತಾಯ ಮಾಡಲು ಬೆಳಗಾವಿಯಲ್ಲಿ ನಡೆಯುವ ಉಪವಾಸ ಸತ್ಯಾಗ್ರಹಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇವೆ. ನಮ್ಮ ಸಮಾಜದ ಏಳಿಗೆಗೆ ಯಾರೇ ಹೋರಾಡಿದರೂ ಸಮಾಜದ ಎಲ್ಲ ಜನ ಬೆಂಬಲ ನೀಡಬೇಕು. ಮೀಸಲಾತಿಗಾಗಿ ಆಗ್ರಹಿಸಿ ನಡೆಯುವ ಈ ಹೋರಾಟ ಮೊದಲನೆಯದೇನಲ್ಲ. 25 ವರ್ಷಗಳಿಂದ ನಿರಂತರವಾಗಿ ನಡೆದುಕೊಂಡು ಬಂದಿದ್ದು, ಬೇಡಿಕೆ ಈಡೇರುವ ತನಕ ಹೋರಾಟ ಮುಂದುವರಿಯುತ್ತದೆ’ ಎಂದರು.