<p><strong>ಹುಬ್ಬಳ್ಳಿ</strong>: ‘ಸ್ಥಳೀಯ ಕುಶಲಕರ್ಮಿಗಳು, ಅವರ ಉತ್ಪನ್ನಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಒಂದು ನಿಲ್ದಾಣ, ಒಂದು ಉತ್ಪನ್ನ ಯೋಜನೆಯನ್ನು ರೈಲ್ವೆ ನಿಲ್ದಾಣದಲ್ಲಿ ಪರಿಚಯಿಸಲಾಗಿದೆ’ ಎಂದು ಹುಬ್ಬಳ್ಳಿ ವಿಭಾಗೀಯರೈಲ್ವೆ ವ್ಯವಸ್ಥಾಪಕ ಅರವಿಂದ ಮಾಳಖೇಡ ಹೇಳಿದರು.</p>.<p>ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಒಂದು ನಿಲ್ದಾಣ, ಒಂದು ಉತ್ಪನ್ನ ಯೋಜನೆ ಅಡಿ ಶನಿವಾರ ಗದಗ-ಬೆಟಗೇರಿ ಹಾಗೂ ಇಳಕಲ್ ಸೀರೆಗಳ ಮಳಿಗೆ ಉದ್ಘಾಟಿಸಿ ಮಾತನಾಡಿದ ಅವರು, ‘ರೈಲ್ವೆ ನಿಲ್ದಾಣದಲ್ಲಿ ಮಳಿಗೆ ಪ್ರಾರಂಭಿಸಿರುವುದರಿಂದ ವಿವಿಧೆಡೆ ಪ್ರಯಾಣಿಸುವವರಿಗೆ ಮತ್ತೊಂದು ಭಾಗದ ಸಂಸ್ಕೃತಿ, ಕಲೆಯ ಪರಿಚಯವಾಗುತ್ತದೆ’ ಎಂದರು.</p>.<p>ವರಿಷ್ಠ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕಿ ಹರೀತಾ ಎಸ್ ಅವರು ಮಾತನಾಡಿ, ‘ಈ ಯೋಜನೆಯನ್ನು ಹುಬ್ಬಳ್ಳಿ ವಿಭಾಗದ 15 ರೈಲು ನಿಲ್ದಾಣಗಳಿಗೆ ವಿಸ್ತರಿಸಲು ಉದ್ದೇಶಿಸಲಾಗಿದ್ದು, ಆಸಕ್ತರು ಹುಬ್ಬಳ್ಳಿಯ ವರಿಷ್ಠ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರ ಕಾರ್ಯಾಲಯದ ಅಧಿಕಾರಿಗಳನ್ನು ಸಂಪರ್ಕಿಸಬಹುದು’ ಎಂದರು.</p>.<p>ಹುಬ್ಬಳ್ಳಿ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಸಂತೋಷ್ ವರ್ಮಾ, ಗದಗ ವೀವರ್ಸ್ ಪ್ರೊಡ್ಯೂಸರ್ಸ್ ಕಂಪನಿಯ ನಿರ್ದೇಶಕ ಮಹೇಶ್ ಇಂಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಸ್ಥಳೀಯ ಕುಶಲಕರ್ಮಿಗಳು, ಅವರ ಉತ್ಪನ್ನಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಒಂದು ನಿಲ್ದಾಣ, ಒಂದು ಉತ್ಪನ್ನ ಯೋಜನೆಯನ್ನು ರೈಲ್ವೆ ನಿಲ್ದಾಣದಲ್ಲಿ ಪರಿಚಯಿಸಲಾಗಿದೆ’ ಎಂದು ಹುಬ್ಬಳ್ಳಿ ವಿಭಾಗೀಯರೈಲ್ವೆ ವ್ಯವಸ್ಥಾಪಕ ಅರವಿಂದ ಮಾಳಖೇಡ ಹೇಳಿದರು.</p>.<p>ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಒಂದು ನಿಲ್ದಾಣ, ಒಂದು ಉತ್ಪನ್ನ ಯೋಜನೆ ಅಡಿ ಶನಿವಾರ ಗದಗ-ಬೆಟಗೇರಿ ಹಾಗೂ ಇಳಕಲ್ ಸೀರೆಗಳ ಮಳಿಗೆ ಉದ್ಘಾಟಿಸಿ ಮಾತನಾಡಿದ ಅವರು, ‘ರೈಲ್ವೆ ನಿಲ್ದಾಣದಲ್ಲಿ ಮಳಿಗೆ ಪ್ರಾರಂಭಿಸಿರುವುದರಿಂದ ವಿವಿಧೆಡೆ ಪ್ರಯಾಣಿಸುವವರಿಗೆ ಮತ್ತೊಂದು ಭಾಗದ ಸಂಸ್ಕೃತಿ, ಕಲೆಯ ಪರಿಚಯವಾಗುತ್ತದೆ’ ಎಂದರು.</p>.<p>ವರಿಷ್ಠ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕಿ ಹರೀತಾ ಎಸ್ ಅವರು ಮಾತನಾಡಿ, ‘ಈ ಯೋಜನೆಯನ್ನು ಹುಬ್ಬಳ್ಳಿ ವಿಭಾಗದ 15 ರೈಲು ನಿಲ್ದಾಣಗಳಿಗೆ ವಿಸ್ತರಿಸಲು ಉದ್ದೇಶಿಸಲಾಗಿದ್ದು, ಆಸಕ್ತರು ಹುಬ್ಬಳ್ಳಿಯ ವರಿಷ್ಠ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರ ಕಾರ್ಯಾಲಯದ ಅಧಿಕಾರಿಗಳನ್ನು ಸಂಪರ್ಕಿಸಬಹುದು’ ಎಂದರು.</p>.<p>ಹುಬ್ಬಳ್ಳಿ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಸಂತೋಷ್ ವರ್ಮಾ, ಗದಗ ವೀವರ್ಸ್ ಪ್ರೊಡ್ಯೂಸರ್ಸ್ ಕಂಪನಿಯ ನಿರ್ದೇಶಕ ಮಹೇಶ್ ಇಂಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>