<p>ಧಾರವಾಡ: ‘ನಾವೀನ್ಯತೆ ಮತ್ತು ವಿನ್ಯಾಸ ಚಿಂತನೆ ಶೈಕ್ಷಣಿಕ ಸಾಧನಗಳಷ್ಟೇ ಅಲ್ಲ, ಪರಿವರ್ತನೆಗೆ ವೇಗವರ್ಧಕಗಳೂ ಹೌದು’ ಎಂದು ಎಸ್ಡಿಎಂಸಿಇಟಿ ಪ್ರಾಂಶುಪಾಲ ರಮೇಶ್ ಎಲ್. ಚಕ್ರಸಾಲಿ ಹೇಳಿದರು.</p>.<p>ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ (ಎಸ್ಡಿಎಂಸಿಇಟಿ) ಈಚೆಗೆ ಆಯೋಜಿಸಿದ್ದ ನಾವೀನ್ಯತೆ ಮತ್ತು ಸುಸ್ಥಿರತೆ ಕುರಿತ ವಿನ್ಯಾಸ ಚಿಂತನಾ ಕಾರ್ಯಾಗಾರದಲ್ಲಿ ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ತಂತ್ರಜ್ಞಾನ ಕ್ಷೇತ್ರದ ಹೊಸತುಗಳನ್ನು ತಿಳಿದುಕೊಳ್ಳಬೇಕು. ಕೌಶಲ ಕಲಿತು, ಸಾಧನೆ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಎಸ್ಡಿಎಂಇ ಸೊಸೈಟಿ ಕಾರ್ಯದರ್ಶಿ ಜೀವಂಧರ್ ಕುಮಾರ್ ಮಾತನಾಡಿ, ‘ವಿದ್ಯಾರ್ಥಿಗಳು ಉದಾತ್ತ ಚಿಂತನೆ ಬೆಳೆಸಿಕೊಳ್ಳಬೇಕು. ಸಂಶೋಧನೆ ಕಡೆಗೆ ಗಮನ ಹರಿಸಬೇಕು’ ಎಂದರು.</p>.<p>ಇನ್ನೋವಾಸ್ ಸ್ಕೇಪ್ನ ರೋಹಿತ್ ಆರ್., ವಾಣಿಶ್ರೀ, ಸುಪ್ರಿಯಾ ವೈದ್ಯ, ಐಐಸಿ ಮುಖ್ಯಸ್ಥ ಸತೀಶ್ ಎಸ್. ಭೈರಣ್ಣವರ್, ಮಾಹಿತಿ ವಿಜ್ಞಾನ ವಿಭಾಗದ ಮುಖ್ಯಸ್ಥ ಜೆ.ಡಿ. ಪೂಜಾರಿ, ಕೃತಕ ಬುದ್ಧಿಮತ್ತೆ ವಿಭಾಗದ ಮುಖ್ಯಸ್ಥ ಎಸ್.ಆರ್. ಬಿರಾದರ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ನಾವೀನ್ಯತೆ ಮತ್ತು ವಿನ್ಯಾಸ ಚಿಂತನೆ ಶೈಕ್ಷಣಿಕ ಸಾಧನಗಳಷ್ಟೇ ಅಲ್ಲ, ಪರಿವರ್ತನೆಗೆ ವೇಗವರ್ಧಕಗಳೂ ಹೌದು’ ಎಂದು ಎಸ್ಡಿಎಂಸಿಇಟಿ ಪ್ರಾಂಶುಪಾಲ ರಮೇಶ್ ಎಲ್. ಚಕ್ರಸಾಲಿ ಹೇಳಿದರು.</p>.<p>ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ (ಎಸ್ಡಿಎಂಸಿಇಟಿ) ಈಚೆಗೆ ಆಯೋಜಿಸಿದ್ದ ನಾವೀನ್ಯತೆ ಮತ್ತು ಸುಸ್ಥಿರತೆ ಕುರಿತ ವಿನ್ಯಾಸ ಚಿಂತನಾ ಕಾರ್ಯಾಗಾರದಲ್ಲಿ ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ತಂತ್ರಜ್ಞಾನ ಕ್ಷೇತ್ರದ ಹೊಸತುಗಳನ್ನು ತಿಳಿದುಕೊಳ್ಳಬೇಕು. ಕೌಶಲ ಕಲಿತು, ಸಾಧನೆ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಎಸ್ಡಿಎಂಇ ಸೊಸೈಟಿ ಕಾರ್ಯದರ್ಶಿ ಜೀವಂಧರ್ ಕುಮಾರ್ ಮಾತನಾಡಿ, ‘ವಿದ್ಯಾರ್ಥಿಗಳು ಉದಾತ್ತ ಚಿಂತನೆ ಬೆಳೆಸಿಕೊಳ್ಳಬೇಕು. ಸಂಶೋಧನೆ ಕಡೆಗೆ ಗಮನ ಹರಿಸಬೇಕು’ ಎಂದರು.</p>.<p>ಇನ್ನೋವಾಸ್ ಸ್ಕೇಪ್ನ ರೋಹಿತ್ ಆರ್., ವಾಣಿಶ್ರೀ, ಸುಪ್ರಿಯಾ ವೈದ್ಯ, ಐಐಸಿ ಮುಖ್ಯಸ್ಥ ಸತೀಶ್ ಎಸ್. ಭೈರಣ್ಣವರ್, ಮಾಹಿತಿ ವಿಜ್ಞಾನ ವಿಭಾಗದ ಮುಖ್ಯಸ್ಥ ಜೆ.ಡಿ. ಪೂಜಾರಿ, ಕೃತಕ ಬುದ್ಧಿಮತ್ತೆ ವಿಭಾಗದ ಮುಖ್ಯಸ್ಥ ಎಸ್.ಆರ್. ಬಿರಾದರ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>