<p><strong>ಧಾರವಾಡ:</strong> ‘ವಿಶ್ವವಿದ್ಯಾಲಯದಲ್ಲಿ ನಡೆಯುವ ಸಂಶೋಧನೆಗಳು ಸಾಮಾನ್ಯ ಜನರಿಗೂ ತಲುಪಬೇಕು ಎಂದು ಕ.ವಿ.ವಿ ನಿವೃತ್ತ ಕುಲಪತಿ ಕೆ.ಬಿ.ಗುಡಸಿ ಅಭಿಪ್ರಾಯಪಟ್ಟರು.</p>.<p>ಕರ್ನಾಟಕ ವಿದ್ಯಾವರ್ಧಕ ಸಂಘವು ಪ್ರೊ.ಶರಣಪ್ಪ ತೋಟಪ್ಪ ನಂದಿಬೇವೂರ ದತ್ತಿ ಅಂಗವಾಗಿ ಈಚೆಗೆ ಆಯೋಜಿಸಿದ್ದ ‘ಯುವ ವಿಜ್ಞಾನಿ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಪ್ರೊ. ಎಸ್.ಟಿ. ನಂದಿಬೇವೂರ ಅವರು ರಸಾಯನಶಾಸ್ತ್ರದ ಪ್ರಾಧ್ಯಾಪಕರಾಗಿ 60 ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ್ದಾರೆ. ಸುಮಾರು 500ಕ್ಕೂ ಹೆಚ್ಚು ವೈಜ್ಞಾನಿಕ ಲೇಖನ ಬರೆದಿದ್ದಾರೆ’ ಎಂದು ತಿಳಿಸಿದರು.</p>.<p>‘ಈ ಪ್ರಶಸ್ತಿ ಕೊಡುವ ಹಿನ್ನೆಲೆ ಹಾಗೂ ಉದ್ದೇಶವನ್ನು ಸಂಶೋಧನಾ ವಿದ್ಯಾರ್ಥಿಗಳು ಅರ್ಥ ಮಾಡಿಕೊಳ್ಳಬೇಕು. ಅದು ಭವಿಷ್ಯದ ನಿಮ್ಮ ಸಾಧನೆಗೆ ಸ್ಫೂರ್ತಿಯಾಗುತ್ತದೆ’ ಎಂದರು.</p>.<p>ಸಂಘದ ಉಪಾಧ್ಯಕ್ಷ ಡಾ.ಸಂಜೀವ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ರವಿ ಕಾಂಬಳೆ, ಅರುಣಾ ನಂದಿಬೇವೂರ, ಎಸ್.ಟಿ.ನಂದಿಬೇವೂರು, ಶಂಕರ ಹಲಗತ್ತಿ, ವಿಶ್ವೇಶ್ವರಿ ಹಿರೇಮಠ, ಶೈಲಜಾ ಅಮರಶೆಟ್ಟಿ, ಶಿವಾನಂದ ಭಾವಿಕಟ್ಟಿ, ವೀರಣ್ಣಒಡ್ಡೀನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ವಿಶ್ವವಿದ್ಯಾಲಯದಲ್ಲಿ ನಡೆಯುವ ಸಂಶೋಧನೆಗಳು ಸಾಮಾನ್ಯ ಜನರಿಗೂ ತಲುಪಬೇಕು ಎಂದು ಕ.ವಿ.ವಿ ನಿವೃತ್ತ ಕುಲಪತಿ ಕೆ.ಬಿ.ಗುಡಸಿ ಅಭಿಪ್ರಾಯಪಟ್ಟರು.</p>.<p>ಕರ್ನಾಟಕ ವಿದ್ಯಾವರ್ಧಕ ಸಂಘವು ಪ್ರೊ.ಶರಣಪ್ಪ ತೋಟಪ್ಪ ನಂದಿಬೇವೂರ ದತ್ತಿ ಅಂಗವಾಗಿ ಈಚೆಗೆ ಆಯೋಜಿಸಿದ್ದ ‘ಯುವ ವಿಜ್ಞಾನಿ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಪ್ರೊ. ಎಸ್.ಟಿ. ನಂದಿಬೇವೂರ ಅವರು ರಸಾಯನಶಾಸ್ತ್ರದ ಪ್ರಾಧ್ಯಾಪಕರಾಗಿ 60 ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ್ದಾರೆ. ಸುಮಾರು 500ಕ್ಕೂ ಹೆಚ್ಚು ವೈಜ್ಞಾನಿಕ ಲೇಖನ ಬರೆದಿದ್ದಾರೆ’ ಎಂದು ತಿಳಿಸಿದರು.</p>.<p>‘ಈ ಪ್ರಶಸ್ತಿ ಕೊಡುವ ಹಿನ್ನೆಲೆ ಹಾಗೂ ಉದ್ದೇಶವನ್ನು ಸಂಶೋಧನಾ ವಿದ್ಯಾರ್ಥಿಗಳು ಅರ್ಥ ಮಾಡಿಕೊಳ್ಳಬೇಕು. ಅದು ಭವಿಷ್ಯದ ನಿಮ್ಮ ಸಾಧನೆಗೆ ಸ್ಫೂರ್ತಿಯಾಗುತ್ತದೆ’ ಎಂದರು.</p>.<p>ಸಂಘದ ಉಪಾಧ್ಯಕ್ಷ ಡಾ.ಸಂಜೀವ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ರವಿ ಕಾಂಬಳೆ, ಅರುಣಾ ನಂದಿಬೇವೂರ, ಎಸ್.ಟಿ.ನಂದಿಬೇವೂರು, ಶಂಕರ ಹಲಗತ್ತಿ, ವಿಶ್ವೇಶ್ವರಿ ಹಿರೇಮಠ, ಶೈಲಜಾ ಅಮರಶೆಟ್ಟಿ, ಶಿವಾನಂದ ಭಾವಿಕಟ್ಟಿ, ವೀರಣ್ಣಒಡ್ಡೀನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>