<p><strong>ಧಾರವಾಡ:</strong> ‘ಬಸವಣ್ಣನವರು ವಿಶ್ವಕ್ಕೆ ವಚನ ಸಾಹಿತ್ಯವನ್ನು ಕೊಡುಗೆ ನೀಡಿದರು. ಸಮಾಜದ ಏಳಿಗೆಗೆ ಶ್ರಮಿಸಿದರು’ ಎಂದು ಸಾಹಿತಿ ಎಸ್.ಆರ್. ಗುಂಜಾಳ್ ಹೇಳಿದರು.</p>.<p>ನಗರದ ಲಿಂಗಾಯತ ಟೌನ್ಹಾಲ್ ಆವರಣದಲ್ಲಿ ಪ್ರವಚನ ಸಮಿತಿ ಏರ್ಪಡಿಸಿರುವ ನಿಜಗುಣಾನಂದ ಸ್ವಾಮಿಜಿ ಅವರ ವಿಶ್ವಧರ್ಮ ಪ್ರವಚನ ಸಮಾರಂಭದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಸಕಲ ಜೀವರಾಶಿಗೆ ಲೇಸು ಬಯಸಿದ ವಿಶ್ವ ಗುರು ಬಸವಣ್ಣ, ಮೂಢನಂಬಿಕೆ, ಕಂದಾಚಾರಗಳಿಂದ ತುಂಬಿದ್ದ ಸಮಾಜದ ಸುಧಾರಣೆಗೆ ಹೋರಾಡಿದರು. 12ನೇ ಶತಮಾನದಲ್ಲಿ ಸ್ತ್ರೀ ಸಮಾನತೆಗಾಗಿ ಶ್ರಮಿಸಿದರು. ಅವರ ವಚನಗಳು ದಾರಿದೀಪವಾಗಿವೆ’ ಎಂದರು.</p>.<p>ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ‘ಯುವಕರು ಹಾಗೂ ಮಕ್ಕಳಿಗೆ ಬಸವ ಸಂಸ್ಕೃತಿ, ಸಂಸ್ಕಾರ ತಿಳಿಸುವ ಅಗತ್ಯವಿದೆ. ಉತ್ತಮ ಪ್ರಜೆಗಳಾಗಿ, ಸಮಾಜದ ಒಳಿತಿಗಾಗಿ ದುಡಿಯುವ ಪೀಳಿಗೆ ಸಿದ್ಧವಾಗಬೇಕು. ಅವರನ್ನು ಪ್ರವಚನ ಕಾರ್ಯಕ್ರಮಕ್ಕೆ ಕರೆತರಬೇಕು’ ಎಂದು ಹೇಳಿದರು.</p>.<p>ರಾಜಶೇಖರ ಬೆಳ್ಳಕ್ಕಿ, ವೀರಣ್ಣ ರಾಜೂರ, ಶಿವಶಂಕರ್ ಹಂಪನ್ನವರ, ರಾಜು ಮರಳಪ್ಪನವರ, ನಾಗರಾಜ ಪಟ್ಟಣಶೆಟ್ಟಿ, ಹನಮಂತ ಮಾರಡಗಿ, ಗುರುರಾಜ ಹುಣಸಿಮರದ, ಶಿವಶರಣ್, ಶಂಭುಲಿಂಗ ಹೆಗಡಾಳ್, ಗಿರೀಶ್ ದೇಸೂರ, ಶಿವರುದ್ರಗೌಡ ಪಾಟೀಲ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ಬಸವಣ್ಣನವರು ವಿಶ್ವಕ್ಕೆ ವಚನ ಸಾಹಿತ್ಯವನ್ನು ಕೊಡುಗೆ ನೀಡಿದರು. ಸಮಾಜದ ಏಳಿಗೆಗೆ ಶ್ರಮಿಸಿದರು’ ಎಂದು ಸಾಹಿತಿ ಎಸ್.ಆರ್. ಗುಂಜಾಳ್ ಹೇಳಿದರು.</p>.<p>ನಗರದ ಲಿಂಗಾಯತ ಟೌನ್ಹಾಲ್ ಆವರಣದಲ್ಲಿ ಪ್ರವಚನ ಸಮಿತಿ ಏರ್ಪಡಿಸಿರುವ ನಿಜಗುಣಾನಂದ ಸ್ವಾಮಿಜಿ ಅವರ ವಿಶ್ವಧರ್ಮ ಪ್ರವಚನ ಸಮಾರಂಭದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಸಕಲ ಜೀವರಾಶಿಗೆ ಲೇಸು ಬಯಸಿದ ವಿಶ್ವ ಗುರು ಬಸವಣ್ಣ, ಮೂಢನಂಬಿಕೆ, ಕಂದಾಚಾರಗಳಿಂದ ತುಂಬಿದ್ದ ಸಮಾಜದ ಸುಧಾರಣೆಗೆ ಹೋರಾಡಿದರು. 12ನೇ ಶತಮಾನದಲ್ಲಿ ಸ್ತ್ರೀ ಸಮಾನತೆಗಾಗಿ ಶ್ರಮಿಸಿದರು. ಅವರ ವಚನಗಳು ದಾರಿದೀಪವಾಗಿವೆ’ ಎಂದರು.</p>.<p>ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ‘ಯುವಕರು ಹಾಗೂ ಮಕ್ಕಳಿಗೆ ಬಸವ ಸಂಸ್ಕೃತಿ, ಸಂಸ್ಕಾರ ತಿಳಿಸುವ ಅಗತ್ಯವಿದೆ. ಉತ್ತಮ ಪ್ರಜೆಗಳಾಗಿ, ಸಮಾಜದ ಒಳಿತಿಗಾಗಿ ದುಡಿಯುವ ಪೀಳಿಗೆ ಸಿದ್ಧವಾಗಬೇಕು. ಅವರನ್ನು ಪ್ರವಚನ ಕಾರ್ಯಕ್ರಮಕ್ಕೆ ಕರೆತರಬೇಕು’ ಎಂದು ಹೇಳಿದರು.</p>.<p>ರಾಜಶೇಖರ ಬೆಳ್ಳಕ್ಕಿ, ವೀರಣ್ಣ ರಾಜೂರ, ಶಿವಶಂಕರ್ ಹಂಪನ್ನವರ, ರಾಜು ಮರಳಪ್ಪನವರ, ನಾಗರಾಜ ಪಟ್ಟಣಶೆಟ್ಟಿ, ಹನಮಂತ ಮಾರಡಗಿ, ಗುರುರಾಜ ಹುಣಸಿಮರದ, ಶಿವಶರಣ್, ಶಂಭುಲಿಂಗ ಹೆಗಡಾಳ್, ಗಿರೀಶ್ ದೇಸೂರ, ಶಿವರುದ್ರಗೌಡ ಪಾಟೀಲ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>