<p><strong>ಧಾರವಾಡ:</strong> ‘ಕ್ರೀಡಾಸಕ್ತ ಮಕ್ಕಳನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡಬೇಕು. ಆರೋಗ್ಯಯುತ ಜೀವನಕ್ಕೆ ಕ್ರೀಡಾ ಚಟುವಟಿಕೆಗಳು ಅಗತ್ಯ’ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.</p>.<p>ನಗರದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಗುರುವಾರ ಏರ್ಪಡಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ಹಾಕಿ ಆಟಗಾರ ಧ್ಯಾನ್ಚಂದ್ ಅವರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾದಿನವಾಗಿ ಆಚರಿಸಲಾಗುತ್ತದೆ. ಅವರ ಸಾಧನೆ ಆಟಗಾರರಿಗೆ ಸ್ಫೂರ್ತಿಯಾಗಿದೆ. ಧ್ಯಾನ್ಚಂದ್ ಅವರಂತೆ ಕ್ರೀಡಾಪಟುಗಳು ಸಾಧನೆ ಮಾಡಬೇಕು’ ಎಂದರು.</p>.<p>‘ಚಿಕ್ಕಂದಿನಲ್ಲೇ ಮಕ್ಕಳ ಕ್ರೀಡಾ ಪ್ರತಿಭೆ ಗುರುತಿಸಿ, ಪೋಷಿಸಬೇಕು. ಸತತ ಕ್ರೀಡಾಭ್ಯಾಸ ಮಾಡಿದರೆ ಅದ್ಭುತ ಸಾಧನೆ ಮಾಡಲು ಸಾಧ್ಯ’ ಎಂದು ಹೇಳಿದರು.</p>.<p>ಹುಬ್ಬಳ್ಳಿ–ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕಿರ್ ಸನದಿ ಮಾತನಾಡಿ, ‘ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವುದು ನಮ್ಮ ಕರ್ತವ್ಯ. ಮೈದಾನ ಕಲ್ಪಿಸುವ ನಿಟ್ಟಿನಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಿವೇಶನ ಒದಗಿಸಲು ಪ್ರಯತ್ನಿಸಲಾಗುವುದು. ಕ್ರೀಡಾಪಟುಗಳಿಗೆ ಅಗತ್ಯ ನೆರವು ನೀಡಲಾಗುವುದು’ ಎಂದು ತಿಳಿಸಿದರು. </p>.<p>ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಟಿ.ಮಂಜುನಾಥ, ಆರ್.ಬಾವಿಕಟ್ಟಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ಕ್ರೀಡಾಸಕ್ತ ಮಕ್ಕಳನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡಬೇಕು. ಆರೋಗ್ಯಯುತ ಜೀವನಕ್ಕೆ ಕ್ರೀಡಾ ಚಟುವಟಿಕೆಗಳು ಅಗತ್ಯ’ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.</p>.<p>ನಗರದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಗುರುವಾರ ಏರ್ಪಡಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ಹಾಕಿ ಆಟಗಾರ ಧ್ಯಾನ್ಚಂದ್ ಅವರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾದಿನವಾಗಿ ಆಚರಿಸಲಾಗುತ್ತದೆ. ಅವರ ಸಾಧನೆ ಆಟಗಾರರಿಗೆ ಸ್ಫೂರ್ತಿಯಾಗಿದೆ. ಧ್ಯಾನ್ಚಂದ್ ಅವರಂತೆ ಕ್ರೀಡಾಪಟುಗಳು ಸಾಧನೆ ಮಾಡಬೇಕು’ ಎಂದರು.</p>.<p>‘ಚಿಕ್ಕಂದಿನಲ್ಲೇ ಮಕ್ಕಳ ಕ್ರೀಡಾ ಪ್ರತಿಭೆ ಗುರುತಿಸಿ, ಪೋಷಿಸಬೇಕು. ಸತತ ಕ್ರೀಡಾಭ್ಯಾಸ ಮಾಡಿದರೆ ಅದ್ಭುತ ಸಾಧನೆ ಮಾಡಲು ಸಾಧ್ಯ’ ಎಂದು ಹೇಳಿದರು.</p>.<p>ಹುಬ್ಬಳ್ಳಿ–ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕಿರ್ ಸನದಿ ಮಾತನಾಡಿ, ‘ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವುದು ನಮ್ಮ ಕರ್ತವ್ಯ. ಮೈದಾನ ಕಲ್ಪಿಸುವ ನಿಟ್ಟಿನಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಿವೇಶನ ಒದಗಿಸಲು ಪ್ರಯತ್ನಿಸಲಾಗುವುದು. ಕ್ರೀಡಾಪಟುಗಳಿಗೆ ಅಗತ್ಯ ನೆರವು ನೀಡಲಾಗುವುದು’ ಎಂದು ತಿಳಿಸಿದರು. </p>.<p>ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಟಿ.ಮಂಜುನಾಥ, ಆರ್.ಬಾವಿಕಟ್ಟಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>