<p><strong>ಧಾರವಾಡ</strong>: ‘ವಿದ್ಯಾರ್ಥಿಗಳು ಏಕಾಗ್ರತೆಯಿಂದ ಅಧ್ಯಯನ ಮಾಡಿದರೆ, ಪರಿಶ್ರಮ ಹಾಕಿದರೆ ಯಶಸ್ಸು ಗಳಿಸಲು ಸಾಧ್ಯ’ ಎಂದು ಡಾ. ಶ್ವೇತಾ ಸಂಕನೂರ ಹೇಳಿದರು.</p>.<p>ವೈ.ಬಿ. ಅಣ್ಣಿಗೇರಿ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನಲ್ಲಿ ಈಚೆಗೆ ಆಯೋಜಿಸಿದ್ದ 2024-25ನೇ ಸಾಲಿನ ಪಠ್ಯ, ಪಠ್ಯೇತರ ಹಾಗೂ ಕ್ರೀಡಾ ಚಟುವಟಿಕೆಗಳ ಪ್ರತಿಭಾ ಪುರಸ್ಕಾರ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಓದಿನತ್ತ ಹೆಚ್ಚು ಗಮನ ಕೊಡಬೇಕು. ಶಿಕ್ಷಕರು ಬೋಧಿಸುವ ವಿಷಯಗಳನ್ನು ಚೆನ್ನಾಗಿ ಮನದಟ್ಟು ಮಾಡಿಕೊಳ್ಳಬೇಕು. ಚೆನ್ನಾಗಿ ತಯಾರಿ ನಡೆಸಿ ಪರೀಕ್ಷೆಗಳನ್ನು ಎದುರಿಸಬೇಕು’ ಎಂದು ಸಲಹೆ ನೀಡಿದರು.</p>.<p>ವೈಶುದೀಪ ಫೌಂಡೇಷನ್ ಅಧ್ಯಕ್ಷೆ ಶಿವಲೀಲಾ ಕುಲಕರ್ಣಿ ಮಾತನಾಡಿ, ‘ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ವಿವಿಧ ಕೌಶಲಗಳನ್ನು ಕಲಿತು ಉತ್ತಮ ಬದುಕು ಕಟ್ಟಿಕೊಳ್ಳಬೇಕು’ ಎಂದರು.</p>.<p>ಅಣ್ಣಿಗೇರಿ ಸೇವಾ ಟ್ರಸ್ಟ್ ಅಧ್ಯಕ್ಷ ಎನ್. ವೈ.ಅಣ್ಣಿಗೇರಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಪ್ರಕಾಶ ಜವಳಿ, ಕಾರ್ಯದರ್ಶಿ ರೇಖಾ ಅಣ್ಣಿಗೇರಿ, ಪ್ರೊ. ಬಸವರಾಜ ಉಡಕೇರಿ, ಪ್ರಾಚಾರ್ಯ ಪ್ರೊ.ಮಹಾಬಳೇಶ್ವರಯ್ಯ, ಪ್ರೊ. ಸಚಿನ್ ಕಮತೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ‘ವಿದ್ಯಾರ್ಥಿಗಳು ಏಕಾಗ್ರತೆಯಿಂದ ಅಧ್ಯಯನ ಮಾಡಿದರೆ, ಪರಿಶ್ರಮ ಹಾಕಿದರೆ ಯಶಸ್ಸು ಗಳಿಸಲು ಸಾಧ್ಯ’ ಎಂದು ಡಾ. ಶ್ವೇತಾ ಸಂಕನೂರ ಹೇಳಿದರು.</p>.<p>ವೈ.ಬಿ. ಅಣ್ಣಿಗೇರಿ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನಲ್ಲಿ ಈಚೆಗೆ ಆಯೋಜಿಸಿದ್ದ 2024-25ನೇ ಸಾಲಿನ ಪಠ್ಯ, ಪಠ್ಯೇತರ ಹಾಗೂ ಕ್ರೀಡಾ ಚಟುವಟಿಕೆಗಳ ಪ್ರತಿಭಾ ಪುರಸ್ಕಾರ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಓದಿನತ್ತ ಹೆಚ್ಚು ಗಮನ ಕೊಡಬೇಕು. ಶಿಕ್ಷಕರು ಬೋಧಿಸುವ ವಿಷಯಗಳನ್ನು ಚೆನ್ನಾಗಿ ಮನದಟ್ಟು ಮಾಡಿಕೊಳ್ಳಬೇಕು. ಚೆನ್ನಾಗಿ ತಯಾರಿ ನಡೆಸಿ ಪರೀಕ್ಷೆಗಳನ್ನು ಎದುರಿಸಬೇಕು’ ಎಂದು ಸಲಹೆ ನೀಡಿದರು.</p>.<p>ವೈಶುದೀಪ ಫೌಂಡೇಷನ್ ಅಧ್ಯಕ್ಷೆ ಶಿವಲೀಲಾ ಕುಲಕರ್ಣಿ ಮಾತನಾಡಿ, ‘ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ವಿವಿಧ ಕೌಶಲಗಳನ್ನು ಕಲಿತು ಉತ್ತಮ ಬದುಕು ಕಟ್ಟಿಕೊಳ್ಳಬೇಕು’ ಎಂದರು.</p>.<p>ಅಣ್ಣಿಗೇರಿ ಸೇವಾ ಟ್ರಸ್ಟ್ ಅಧ್ಯಕ್ಷ ಎನ್. ವೈ.ಅಣ್ಣಿಗೇರಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಪ್ರಕಾಶ ಜವಳಿ, ಕಾರ್ಯದರ್ಶಿ ರೇಖಾ ಅಣ್ಣಿಗೇರಿ, ಪ್ರೊ. ಬಸವರಾಜ ಉಡಕೇರಿ, ಪ್ರಾಚಾರ್ಯ ಪ್ರೊ.ಮಹಾಬಳೇಶ್ವರಯ್ಯ, ಪ್ರೊ. ಸಚಿನ್ ಕಮತೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>