‘ಸರ್ಕಾರದ ನಿಯಮಗಳಿಂದ ವಿದ್ಯಾರ್ಥಿಗಳನ್ನು ಬದಲಾವಣೆ ಮಾಡಲು ಸಾಧ್ಯವಿಲ್ಲ. ಶಿಕ್ಷಣ ನೀಡುವ ಜೊತೆಗೆ ಅವರಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸಬೇಕು. ಶಿಕ್ಷಕರು ವೃತ್ತಿಬದ್ಧತೆ ಬೆಳೆಸಿಕೊಂಡು ಸಮಾಜದಿಂದ ಏನನ್ನೂ ನಿರೀಕ್ಷಿಸದೇ, ತಮ್ಮನ್ನು ಇನ್ನೊಬ್ಬರೊಂದಿಗೆ ಹೋಲಿಕೆ ಮಾಡಿಕೊಳ್ಳದೇ ಕೆಲಸ ಮಾಡಬೇಕು. ದೊಡ್ಡ ಹುದ್ದೆಗೇರಿದ ಸಾಧಕರ ಯಶಸ್ಸಿಗೆ ಶಾಲಾ ಹಂತದಲ್ಲಿ ಶಿಕ್ಷಕರು ಹಾಕಿಕೊಟ್ಟ ಗಟ್ಟಿ ಬುನಾದಿ ಕಾರಣವಾಗಿರುತ್ತದೆ. ಆದ್ದರಿಂದ ಶಿಕ್ಷಕರು ಬದ್ಧತೆಯಿಂದ ಕೆಲಸ ಮಾಡಿ ಸದೃಢ ಸಮಾಜ ನಿರ್ಮಿಸುವ ವಿದ್ಯಾರ್ಥಿಗಳನ್ನು ರೂಪಿಸಬೇಕು’ ಎಂದು ಹೇಳಿದರು.