ಶುಕ್ರವಾರ ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ತೆರಿಗೆ ವಸೂಲಿಯಲ್ಲಿ ಕಳಪೆ ಸಾಧನೆಯಾಗುತ್ತಿರುವ ಬಗ್ಗೆ ಆಡಳಿತ– ಮತ್ತು ವಿರೋಧ ಪಕ್ಷದ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಶಿಕ್ಷಣ ಸಂಸ್ಥೆಗಳು, ವಾಣಿಜ್ಯ ಸಂಕೀರ್ಣಗಳು, ದೊಡ್ಡ ಸಂಸ್ಥೆಗಳು ಬಾಕಿ ಉಳಿಸಿಕೊಂಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ದೇಶಪಾಂಡೆ ಪ್ರತಿಷ್ಠಾನ, ಇನ್ಪೊಸಿಸ್, ಅಂಜುಮನ್ ಸಂಸ್ಥೆಗಳ ಹೆಸರನ್ನು ಸಹ ಪ್ರಸ್ತಾಪಿಸಿದರು.