<p><strong>ಅಣ್ಣಿಗೇರಿ</strong>: ಬಾಂಗ್ಲಾ ದೇಶದಲ್ಲಿ ಇತ್ತೀಚೆಗೆ ಹಿಂದೂ ದೇವಾಲಯ ಧ್ವಂಸ ಮಾಡಿ, ಹಿಂದೂ ಯುವತಿಯರನ್ನು ಸಾಮೂಹಿಕ ಅತ್ಯಾಚಾರ ಮಾಡುವ ಮೂಲಕ ಮಾನವಕುಲಕ್ಕೆ ಅವಮಾನ ಮಾಡಿದ್ದಾರೆ ಎಂದು ಯುವಶಕ್ತಿ ಮುಖಂಡ ಭರತೇಶ ಜೈನ್ ಬುಧವಾರ ಆರೋಪಿಸಿದರು.</p>.<p>ಹಿಂದೂ ಯುವತಿಯರನ್ನು ಬಾಂಗ್ಲಾ ದೇಶದ ಮತಾಂಧರು ಮಾನವೀಯತೆ ಮರೆತು ಸಿಕ್ಕ ಸಿಕ್ಕಲ್ಲಿಯೇ ಬರ್ಬರವಾಗಿ ಹತ್ಯೆ ಮಾಡುತ್ತಿರುವುದು ಖೇದಕರ ಸಂಗತಿ. ಈ ಹಿನ್ನಲೆಯಲ್ಲಿ ಪಟ್ಟಣದ ಯುವಶಕ್ತಿ ಪಡೆ ಕೆಲಕಾಲ ಬಸ್ ನಿಲ್ದಾಣದ ಹತ್ತಿರ ಪ್ರತಿಭಟನೆ ಹಮ್ಮಿಕೊಳ್ಳುವ ಮೂಲಕ ಸರ್ಕಾರದ ಗಮನಕ್ಕೆ ತಂದರು.</p>.<p>ಮುಖಂಡ ಚಂಬಣ್ಣ ಸುರಕೋಡ ಮಾತನಾಡಿ, ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಅಮಾನವೀಯ ಘಟನೆಯನ್ನು ಕೂಡಲೇ ರಾಜ್ಯ ಸರ್ಕಾರ ಹಾಗೂ ವಿದೇಶಾಂಗ ಸಚಿವರು ವಿಶ್ವಸಂಸ್ಥೆಯ ಗಮನಕ್ಕೆ ತಂದು ಅವರ ವಿರುದ್ದ ಕಠಿಣ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಿದರು.</p>.<p>ಪ್ರತಿಭಟನಾ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿ ಆರ್.ಎಚ್.ಕುನ್ನಿಬಾಯಿ ಭೇಟಿ ನೀಡಿ ಮನವಿ ಸ್ವೀಕರಿಸಿದರು. ಶಂಕ್ರಪ್ಪ ಇಂಗಳಹಳ್ಳಿ, ಸುರೇಶ ಮಂಗಳೂರ, ಜಗದೀಶ ಕೋಳಿವಾಡ, ಸಂಜು ನಾಗನಕೇರಿ ಮೊದಲಾದವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಣ್ಣಿಗೇರಿ</strong>: ಬಾಂಗ್ಲಾ ದೇಶದಲ್ಲಿ ಇತ್ತೀಚೆಗೆ ಹಿಂದೂ ದೇವಾಲಯ ಧ್ವಂಸ ಮಾಡಿ, ಹಿಂದೂ ಯುವತಿಯರನ್ನು ಸಾಮೂಹಿಕ ಅತ್ಯಾಚಾರ ಮಾಡುವ ಮೂಲಕ ಮಾನವಕುಲಕ್ಕೆ ಅವಮಾನ ಮಾಡಿದ್ದಾರೆ ಎಂದು ಯುವಶಕ್ತಿ ಮುಖಂಡ ಭರತೇಶ ಜೈನ್ ಬುಧವಾರ ಆರೋಪಿಸಿದರು.</p>.<p>ಹಿಂದೂ ಯುವತಿಯರನ್ನು ಬಾಂಗ್ಲಾ ದೇಶದ ಮತಾಂಧರು ಮಾನವೀಯತೆ ಮರೆತು ಸಿಕ್ಕ ಸಿಕ್ಕಲ್ಲಿಯೇ ಬರ್ಬರವಾಗಿ ಹತ್ಯೆ ಮಾಡುತ್ತಿರುವುದು ಖೇದಕರ ಸಂಗತಿ. ಈ ಹಿನ್ನಲೆಯಲ್ಲಿ ಪಟ್ಟಣದ ಯುವಶಕ್ತಿ ಪಡೆ ಕೆಲಕಾಲ ಬಸ್ ನಿಲ್ದಾಣದ ಹತ್ತಿರ ಪ್ರತಿಭಟನೆ ಹಮ್ಮಿಕೊಳ್ಳುವ ಮೂಲಕ ಸರ್ಕಾರದ ಗಮನಕ್ಕೆ ತಂದರು.</p>.<p>ಮುಖಂಡ ಚಂಬಣ್ಣ ಸುರಕೋಡ ಮಾತನಾಡಿ, ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಅಮಾನವೀಯ ಘಟನೆಯನ್ನು ಕೂಡಲೇ ರಾಜ್ಯ ಸರ್ಕಾರ ಹಾಗೂ ವಿದೇಶಾಂಗ ಸಚಿವರು ವಿಶ್ವಸಂಸ್ಥೆಯ ಗಮನಕ್ಕೆ ತಂದು ಅವರ ವಿರುದ್ದ ಕಠಿಣ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಿದರು.</p>.<p>ಪ್ರತಿಭಟನಾ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿ ಆರ್.ಎಚ್.ಕುನ್ನಿಬಾಯಿ ಭೇಟಿ ನೀಡಿ ಮನವಿ ಸ್ವೀಕರಿಸಿದರು. ಶಂಕ್ರಪ್ಪ ಇಂಗಳಹಳ್ಳಿ, ಸುರೇಶ ಮಂಗಳೂರ, ಜಗದೀಶ ಕೋಳಿವಾಡ, ಸಂಜು ನಾಗನಕೇರಿ ಮೊದಲಾದವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>