ಹುಬ್ಬಳ್ಳಿ: ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿಸುವ ಪ್ರಮಾಣವನ್ನು ಕಡಿತಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಮಹದಾಯಿ ಕಳಸಾ ಬಂಡೂರಿ ಹೋರಾಟ ಸಮನ್ವಯ ಸಮಿತಿ ಪದಾಧಿಕಾರಿಗಳು ಇಲ್ಲಿನ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಆರಂಭದಲ್ಲಿ ಪ್ರತಿ ರೈತರಿಂದ 10 ಕ್ವಿಂಟಲ್ ಖರೀದಿಸುವುದಾಗಿ ಘೋಷಿಸಿದ್ದ ಕೇಂದ್ರ ಸರ್ಕಾರ ಇದೀಗ ಪ್ರತಿ ರೈತರಿಂದ ಕೇವಲ 4 ಕ್ವಿಂಟಲ್ ಮಾತ್ರ ಖರೀದಿಸಲು ಮುಂದಾಗಿರುವುದಕ್ಕೆ ವಿರೋಧ ವ್ಯಕ್ತಪಡಿಸಿದರು.
ಪ್ರತಿ ರೈತರಿಂದ 15 ಕ್ವಿಂಟಲ್ ಖರೀದಿಸಬೇಕು ಮತ್ತು ಹೆಸರು ನೋಂದಾಯಿಸಿರುವ ಎಲ್ಲಾ ರೈತರ ಹೆಸರನ್ನು ಖರೀದಿಸಬೇಕು. ಖರೀದಿಸಿದ ಹೆಸರಿಗೆ ತಕ್ಷಣ ಹಣ ಪಾವತಿಸಬೇಕು ಎಂದು ಆಗ್ರಹಿಸಿದರು.