ಹುಬ್ಬಳ್ಳಿ: ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ಪೌರತ್ವ (ತಿದ್ದುಪಡಿ) ಕಾಯ್ದೆ ರದ್ದು ಪಡಿಸಬೇಕು ಎಂದು ಒತ್ತಾಯಿಸಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ/ಪಂಗಡಗಳ ಪೌರ ಕಾರ್ಮಿಕರ ಮತ್ತು ನೌಕರರ ಸಂಘದ ಸದಸ್ಯರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಸಂಗೊಳ್ಳಿ ರಾಯಣ್ಣ ವೃತ್ತದಿಂದ ಮಿನಿ ವಿಧಾನ ಸೌಧದವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದರು. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ದಲಿತ ಮುಖಂಡ ಪಿತಾಂಬ್ರಪ್ಪ ಬಿಳಾರ ಮಾತನಾಡಿ, ‘ಮುಸ್ಲಿಂ ಹಾಗೂ ದಲಿತ ಸಮುದಾಯವನ್ನು ಹತ್ತಿಕ್ಕಬೇಕೆನ್ನುವ ಏಕೈಕ ಉದ್ದೇಶದಿಂದ ಕಾಯ್ದೆ ತಂದಿದೆ’ ಎಂದು ಆರೋಪಿಸಿದರು.
ಸಂಘದ ಅಧ್ಯಕ್ಷ ವಿಜಯ ಗುಂಟ್ರಾಳ, ಅನ್ವರ್ ಮುಧೋಳ, ಮೋಹನ ಹಿರೇಮನಿ, ಗಾಳೆಪ್ಪ ದ್ವಾಸಲಕೇರಿ, ಕಸ್ತೂರೆವ್ವ ಬೆಳಗುಂದಿ, ಗಂಗಮ್ಮ ಸಿಂದ್ರಾಮಪುರ, ನಾಗಮ್ಮ ಗೊಲ್ಲರ, ಕನಕಪ್ಪ ಕೊಟಬಾಗಿ ಇದ್ದರು.