<p><strong>ಹುಬ್ಬಳ್ಳಿ:</strong> ಇಲ್ಲಿನ ಭೈರಿದೇವರಕೊಪ್ಪದ ಸರ್ವಧರ್ಮ ಪ್ರಾರ್ಥನಾ ಮಂದಿರದಲ್ಲಿ ಮತಾಂತರಕ್ಕೆ ಪ್ರಚೋದನೆ ಮಾಡುತ್ತಿದ್ದ ಸೋಮಲಿಂಗ ಅವರಾದಿ ಎಂಬಾತನನ್ನು ಬಂಧಿಸಬೇಕು ಎಂದು ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಲಿಂಗಾಯತ ಸಮುದಾಯದ ಪ್ರಮುಖರು ನವನಗರದ ಪೊಲೀಸ್ ಠಾಣೆ ಮುಂದೆ ಭಾನುವಾರ ಪ್ರತಿಭಟನೆ ನಡೆಸಿದರು.</p>.<p>ಪ್ರಾರ್ಥನೆ ಹೆಸರಲ್ಲಿ ಹಿಂದೂಗಳನ್ನ ತಂದು ಮತಾಂತರ ಮಾಡಲಾಗುತ್ತಿದೆ ಎಂದು ಸಂಘಟನೆಯವರು ಆರೋಪಿಸಿದರು. ಸೋಮಲಿಂಗ ಕ್ರೈಸ್ತ ಸಮುದಾಯದ ಪಾಸ್ಟರ್ ಆಗಿ ಬದಲಾಗಿದ್ದಾನೆ. ಇದನ್ನು ವಿರೋಧಿಸಿ ಪ್ರಾರ್ಥನಾ ಮಂದಿರದ ಹೊರಗೆ ಸಂಘಟನೆಯವರು ಭಜನೆ ಮಾಡಿದರು.</p>.<p>ಈ ವೇಳೆ ಕ್ರಿಶ್ಚಿಯನ್ನರು ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಸ್ಥಳಕ್ಕೆ ನವನಗರ ಎಪಿಎಂಸಿ ಠಾಣೆ ಪೊಲೀಸರು ಬಂದಿದ್ದಾರೆ.</p>.<p><a href="https://www.prajavani.net/karnataka-news/karnataka-police-in-saffron-colour-suits-siddaramaiah-slams-cm-basavaraj-bommai-876182.html" itemprop="url">ಕೇಸರಿ ಧಿರಿಸಲ್ಲಿ ಪೊಲೀಸರು: ತ್ರಿಶೂಲ ದೀಕ್ಷೆಯನ್ನೂ ಕೊಡಬೇಕಿತ್ತೆಂದ ಸಿದ್ದರಾಮಯ್ಯ </a></p>.<p>ಮತಾಂತರಕ್ಕೆ ಪ್ರಚೋದನೆ ನೀಡಿದ ಸೋಮು ಅವರಾದಿಯನ್ನು ಬಂಧಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ. ಪೊಲೀಸ್ ಠಾಣೆ ಆವರಣಕ್ಕೆ ಕರೆದುಕೊಂಡು ಬಂದರೂ ಪೊಲೀಸರು ಬಂಧಿಸಿಲ್ಲ. ತಕ್ಷಣವೇ ಬಂಧಿಸಬೇಕು ಎನ್ನುವ ಬೇಡಿಕೆ ಮುಂದಿಟ್ಟು ಸಂಘಟನೆಯವರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ಮುಂದುವರಿಸಿದ್ದಾರೆ.</p>.<p>ಪೊಲೀಸ್ ಠಾಣೆಯ ಸಮೀಪದಲ್ಲಿಯೇ ಆರೋಪಿ ಸೋಮು ಅವರ ಮೇಲೆ ಹಲ್ಲೆ ಮಾಡಲಾಗಿದೆ. ಬಳಿಕ ಅವರಿಂದ ತಪ್ಪಿಸಿಕೊಂಡ ಸೋಮು ಅವರು ಅಂಬುಲೆನ್ಸ್ ಹತ್ತಿ ಆಸ್ಪತ್ರೆಗೆ ತೆರಳಿದರು.</p>.<p><a href="https://www.prajavani.net/karnataka-news/cops-in-saffron-cloth-huge-criticism-on-social-media-876150.html" itemprop="url">ಕೇಸರಿ ಧಿರಿಸಿನಲ್ಲಿ ಪೊಲೀಸರು: ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಇಲ್ಲಿನ ಭೈರಿದೇವರಕೊಪ್ಪದ ಸರ್ವಧರ್ಮ ಪ್ರಾರ್ಥನಾ ಮಂದಿರದಲ್ಲಿ ಮತಾಂತರಕ್ಕೆ ಪ್ರಚೋದನೆ ಮಾಡುತ್ತಿದ್ದ ಸೋಮಲಿಂಗ ಅವರಾದಿ ಎಂಬಾತನನ್ನು ಬಂಧಿಸಬೇಕು ಎಂದು ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಲಿಂಗಾಯತ ಸಮುದಾಯದ ಪ್ರಮುಖರು ನವನಗರದ ಪೊಲೀಸ್ ಠಾಣೆ ಮುಂದೆ ಭಾನುವಾರ ಪ್ರತಿಭಟನೆ ನಡೆಸಿದರು.</p>.<p>ಪ್ರಾರ್ಥನೆ ಹೆಸರಲ್ಲಿ ಹಿಂದೂಗಳನ್ನ ತಂದು ಮತಾಂತರ ಮಾಡಲಾಗುತ್ತಿದೆ ಎಂದು ಸಂಘಟನೆಯವರು ಆರೋಪಿಸಿದರು. ಸೋಮಲಿಂಗ ಕ್ರೈಸ್ತ ಸಮುದಾಯದ ಪಾಸ್ಟರ್ ಆಗಿ ಬದಲಾಗಿದ್ದಾನೆ. ಇದನ್ನು ವಿರೋಧಿಸಿ ಪ್ರಾರ್ಥನಾ ಮಂದಿರದ ಹೊರಗೆ ಸಂಘಟನೆಯವರು ಭಜನೆ ಮಾಡಿದರು.</p>.<p>ಈ ವೇಳೆ ಕ್ರಿಶ್ಚಿಯನ್ನರು ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಸ್ಥಳಕ್ಕೆ ನವನಗರ ಎಪಿಎಂಸಿ ಠಾಣೆ ಪೊಲೀಸರು ಬಂದಿದ್ದಾರೆ.</p>.<p><a href="https://www.prajavani.net/karnataka-news/karnataka-police-in-saffron-colour-suits-siddaramaiah-slams-cm-basavaraj-bommai-876182.html" itemprop="url">ಕೇಸರಿ ಧಿರಿಸಲ್ಲಿ ಪೊಲೀಸರು: ತ್ರಿಶೂಲ ದೀಕ್ಷೆಯನ್ನೂ ಕೊಡಬೇಕಿತ್ತೆಂದ ಸಿದ್ದರಾಮಯ್ಯ </a></p>.<p>ಮತಾಂತರಕ್ಕೆ ಪ್ರಚೋದನೆ ನೀಡಿದ ಸೋಮು ಅವರಾದಿಯನ್ನು ಬಂಧಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ. ಪೊಲೀಸ್ ಠಾಣೆ ಆವರಣಕ್ಕೆ ಕರೆದುಕೊಂಡು ಬಂದರೂ ಪೊಲೀಸರು ಬಂಧಿಸಿಲ್ಲ. ತಕ್ಷಣವೇ ಬಂಧಿಸಬೇಕು ಎನ್ನುವ ಬೇಡಿಕೆ ಮುಂದಿಟ್ಟು ಸಂಘಟನೆಯವರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ಮುಂದುವರಿಸಿದ್ದಾರೆ.</p>.<p>ಪೊಲೀಸ್ ಠಾಣೆಯ ಸಮೀಪದಲ್ಲಿಯೇ ಆರೋಪಿ ಸೋಮು ಅವರ ಮೇಲೆ ಹಲ್ಲೆ ಮಾಡಲಾಗಿದೆ. ಬಳಿಕ ಅವರಿಂದ ತಪ್ಪಿಸಿಕೊಂಡ ಸೋಮು ಅವರು ಅಂಬುಲೆನ್ಸ್ ಹತ್ತಿ ಆಸ್ಪತ್ರೆಗೆ ತೆರಳಿದರು.</p>.<p><a href="https://www.prajavani.net/karnataka-news/cops-in-saffron-cloth-huge-criticism-on-social-media-876150.html" itemprop="url">ಕೇಸರಿ ಧಿರಿಸಿನಲ್ಲಿ ಪೊಲೀಸರು: ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>