<p><strong>ಧಾರವಾಡ:</strong> ದೆಹಲಿಯ ಚಾಂದಿನಿ ಚೌಕ್ನಲ್ಲಿ ದುಷ್ಕರ್ಮಿಗಳು ಮಂದಿರ ಧ್ವಂಸ ಮಾಡಿರುವುದನ್ನು ಖಂಡಿಸಿ ವಿಶ್ವ ಹಿಂದೂಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಧರಣಿ ನಡೆಸಿದರು.</p>.<p>ಕಳೆದ ಕೆಲವು ವರ್ಷಗಳಲ್ಲಿ ಪ್ರತ್ಯೇಕವಾದಿ ಮಾನಸಿಕತೆಯಿಂದ ನಡೆಯುತ್ತಿರುವ ಇಸ್ಲಾಮಿಕ್ ಜಿಹಾದಿ ಸಂಘಟನೆಗಳ ದೇಶ ವಿರೋಧಿ, ಹಿಂದೂ ವಿರೋಧಿ ಚಟುವಟಿಕೆಗಳ ಕಾರಣದಿಂದ ದೇಶದಲ್ಲಿ ಹಿಂದೂ ಧಾರ್ಮಿಕ ಶ್ರದ್ಧಾ ಕೆಂದ್ರಗಳ ಮೇಲೆ ನಿರಂತರವಾಗಿ ದಾಳಿ ನಡೆಯುತ್ತಲೇ ಇವೆ. ಈ ಎಲ್ಲ ಚಟುವಟಿಕೆಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಂಕುಶ ಹಾಕಬೇಕು ಎಂದು ಆಗ್ರಹಿಸಿದರು.</p>.<p>ಜಿಹಾದಿಗಳ ದುರ್ವ್ಯಹಾರಗಳು ಸಂಪೂರ್ಣ ಭಾರತವನ್ನು ಚಿಂತೆಗೀಡು ಮಾಡಿದೆ. ಇವರ ಭಯೋತ್ಪಾದನೆ ಹಿಂದೂಗಳ ಬಲವಂತದ ಮತಾಂತರ ಹಾಗೂ ಹಿಂದೂಗಳ ಪಲಾಯನದ ವಿಷಯಗಳಿಂದಾಗಿ ಕಾಶ್ಮೀರದಲ್ಲಿ ಪ್ರತ್ಯೇಕತಾವಾದ, ಕೇರಳ, ಬಂಗಾಳ ಮತ್ತು ಕರ್ನಾಟಕದಲ್ಲಿ ಹಿಂದೂಗಳ ಮೇಲೆ ಸತತ ಆಕ್ರಮಣಗಳು ನಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಧರಣಿಯಲ್ಲಿ ಧಾರವಾಡ ಜಿಲ್ಲಾ ಘಟಕದ ಸಂಚಾಲಕ ಶಿವಾನಂದ ಸತ್ತಿಗೇರಿ, ಎಸ್.ಎಚ್. ಪಾಟೀಲ, ಲಕ್ಷ್ಮಣ ಹೂಗಾರ, ಅಕ್ಷಯ ಕುಲಕರ್ಣಿ, ಮಹಾದೇವ ಕೋರಿ, ಪ್ರಿತೇಶ ಜಾಧವ, ಮಹಾಬಲೇಶ್ವರ ಹೆಗಡೆ, ಗುರುಶಾಂತಯ್ಯ ಹಿರೇಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ದೆಹಲಿಯ ಚಾಂದಿನಿ ಚೌಕ್ನಲ್ಲಿ ದುಷ್ಕರ್ಮಿಗಳು ಮಂದಿರ ಧ್ವಂಸ ಮಾಡಿರುವುದನ್ನು ಖಂಡಿಸಿ ವಿಶ್ವ ಹಿಂದೂಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಧರಣಿ ನಡೆಸಿದರು.</p>.<p>ಕಳೆದ ಕೆಲವು ವರ್ಷಗಳಲ್ಲಿ ಪ್ರತ್ಯೇಕವಾದಿ ಮಾನಸಿಕತೆಯಿಂದ ನಡೆಯುತ್ತಿರುವ ಇಸ್ಲಾಮಿಕ್ ಜಿಹಾದಿ ಸಂಘಟನೆಗಳ ದೇಶ ವಿರೋಧಿ, ಹಿಂದೂ ವಿರೋಧಿ ಚಟುವಟಿಕೆಗಳ ಕಾರಣದಿಂದ ದೇಶದಲ್ಲಿ ಹಿಂದೂ ಧಾರ್ಮಿಕ ಶ್ರದ್ಧಾ ಕೆಂದ್ರಗಳ ಮೇಲೆ ನಿರಂತರವಾಗಿ ದಾಳಿ ನಡೆಯುತ್ತಲೇ ಇವೆ. ಈ ಎಲ್ಲ ಚಟುವಟಿಕೆಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಂಕುಶ ಹಾಕಬೇಕು ಎಂದು ಆಗ್ರಹಿಸಿದರು.</p>.<p>ಜಿಹಾದಿಗಳ ದುರ್ವ್ಯಹಾರಗಳು ಸಂಪೂರ್ಣ ಭಾರತವನ್ನು ಚಿಂತೆಗೀಡು ಮಾಡಿದೆ. ಇವರ ಭಯೋತ್ಪಾದನೆ ಹಿಂದೂಗಳ ಬಲವಂತದ ಮತಾಂತರ ಹಾಗೂ ಹಿಂದೂಗಳ ಪಲಾಯನದ ವಿಷಯಗಳಿಂದಾಗಿ ಕಾಶ್ಮೀರದಲ್ಲಿ ಪ್ರತ್ಯೇಕತಾವಾದ, ಕೇರಳ, ಬಂಗಾಳ ಮತ್ತು ಕರ್ನಾಟಕದಲ್ಲಿ ಹಿಂದೂಗಳ ಮೇಲೆ ಸತತ ಆಕ್ರಮಣಗಳು ನಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಧರಣಿಯಲ್ಲಿ ಧಾರವಾಡ ಜಿಲ್ಲಾ ಘಟಕದ ಸಂಚಾಲಕ ಶಿವಾನಂದ ಸತ್ತಿಗೇರಿ, ಎಸ್.ಎಚ್. ಪಾಟೀಲ, ಲಕ್ಷ್ಮಣ ಹೂಗಾರ, ಅಕ್ಷಯ ಕುಲಕರ್ಣಿ, ಮಹಾದೇವ ಕೋರಿ, ಪ್ರಿತೇಶ ಜಾಧವ, ಮಹಾಬಲೇಶ್ವರ ಹೆಗಡೆ, ಗುರುಶಾಂತಯ್ಯ ಹಿರೇಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>