<p><strong>ಹುಬ್ಬಳ್ಳಿ: </strong>ಇ ಫಾರ್ಮಸಿ ನೀತಿ ವಿರೋಧಿಸಿ ಔಷಧ ವ್ಯಾಪಾರಿಗಳು ಅಂಗಡಿ ಬಂದ್ ಮಾಡಿ ಹುಬ್ಬಳ್ಳಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ದುರ್ಗದಬೈಲ್ ಬಳಿ ಸೇರಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಆನ್ಲೈನ್ ಮೂಲಕ ಔಷಧಿ ಖರೀದಿಸಲು ಅವಕಾಶ ನೀಡುವ ಇ ಫಾರ್ಮಸಿ ನೀತಿ, ಸಾಂಪ್ರದಾಯಿಕ ಔಷಧ ವ್ಯಾಪಾರಿಗಳಿಗೆ ಮಾರಕವಾಗಿದೆ. ಲಕ್ಷಾಂತರ ಕುಟುಂಬಗಳು ಈ ಉದ್ಯಮವನ್ನೇ ಅವಲಂಬಿಸಿವೆ. ಆದ್ದರಿಂದ ಯಾವುದೇ ಕಾರಣಕ್ಕೂ ಸರ್ಕಾ ಇ ಫಾರ್ಮಸಿ ಗೆ ಅವಕಾಶ ನೀಡಬಾರದುಎಂದು ಪ್ರತಿಭಟನಾಕಾರರು ಆಗ್ರಹಿಸಿದರು.</p>.<p>'ನಮ್ಮನ್ನು ಉಳಿಸಲಿ ಎಂದು ಸರ್ಕಾರವನ್ನು ಆಯ್ಕೆ ಮಾಡಿದ್ದೇವೆ, ಆದರೆ ಈ ಸರ್ಕಾರ ನಮ್ಮನ್ನು ಅಳಿಸಲು ಹೊಟಿದೆ. ದೇಶದಲ್ಕಿ ಸುಮಾರು 9 ಲಕ್ಷ ಔಷಧ ಅಂಗಡಿಗಳಿವೆ. ಪರೋಕ್ಣವಾಗಿ ಅದಕ್ಕಿಂತ ಹೆಚ್ಚಿನ ಕುಟುಂಬಗಳು ಈ ಉದ್ಯಮವನ್ನು ಅವಲಂಬಿಸಿವೆ. ಸರ್ಕಾರದ ನೀತಿ ಈ ಎಲ್ಲರಿಗೂ ಮಾರಕವಾಗಿ ಪರಿಣಮಿಸಲಿದೆ' ಎಂದು ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷ ರವೀಂದ್ರ ಭೂಸನೂರ ಹೇಳಿದರು.</p>.<p>'ಇದು ಕೇವಲ ವ್ಯಾಪಾರಿಗಳಿಗೆ ಮಾತ್ರವಲ್ಲ ಸಮಾಜಕ್ಕೂ ಮಾರಕವಾಗಿದೆ. ಅಮಲು ಭರಿಸುವ ಔಷಧಗಳನ್ನು ಯಾರು ಬೇಕಾದರೂ ವೈದ್ಯರ ಸೂಚನೆ ಇಲ್ಲದೆ ಖರೀದಿಸಬಹುದು' ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಇ ಫಾರ್ಮಸಿ ನೀತಿ ವಿರೋಧಿಸಿ ಔಷಧ ವ್ಯಾಪಾರಿಗಳು ಅಂಗಡಿ ಬಂದ್ ಮಾಡಿ ಹುಬ್ಬಳ್ಳಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ದುರ್ಗದಬೈಲ್ ಬಳಿ ಸೇರಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಆನ್ಲೈನ್ ಮೂಲಕ ಔಷಧಿ ಖರೀದಿಸಲು ಅವಕಾಶ ನೀಡುವ ಇ ಫಾರ್ಮಸಿ ನೀತಿ, ಸಾಂಪ್ರದಾಯಿಕ ಔಷಧ ವ್ಯಾಪಾರಿಗಳಿಗೆ ಮಾರಕವಾಗಿದೆ. ಲಕ್ಷಾಂತರ ಕುಟುಂಬಗಳು ಈ ಉದ್ಯಮವನ್ನೇ ಅವಲಂಬಿಸಿವೆ. ಆದ್ದರಿಂದ ಯಾವುದೇ ಕಾರಣಕ್ಕೂ ಸರ್ಕಾ ಇ ಫಾರ್ಮಸಿ ಗೆ ಅವಕಾಶ ನೀಡಬಾರದುಎಂದು ಪ್ರತಿಭಟನಾಕಾರರು ಆಗ್ರಹಿಸಿದರು.</p>.<p>'ನಮ್ಮನ್ನು ಉಳಿಸಲಿ ಎಂದು ಸರ್ಕಾರವನ್ನು ಆಯ್ಕೆ ಮಾಡಿದ್ದೇವೆ, ಆದರೆ ಈ ಸರ್ಕಾರ ನಮ್ಮನ್ನು ಅಳಿಸಲು ಹೊಟಿದೆ. ದೇಶದಲ್ಕಿ ಸುಮಾರು 9 ಲಕ್ಷ ಔಷಧ ಅಂಗಡಿಗಳಿವೆ. ಪರೋಕ್ಣವಾಗಿ ಅದಕ್ಕಿಂತ ಹೆಚ್ಚಿನ ಕುಟುಂಬಗಳು ಈ ಉದ್ಯಮವನ್ನು ಅವಲಂಬಿಸಿವೆ. ಸರ್ಕಾರದ ನೀತಿ ಈ ಎಲ್ಲರಿಗೂ ಮಾರಕವಾಗಿ ಪರಿಣಮಿಸಲಿದೆ' ಎಂದು ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷ ರವೀಂದ್ರ ಭೂಸನೂರ ಹೇಳಿದರು.</p>.<p>'ಇದು ಕೇವಲ ವ್ಯಾಪಾರಿಗಳಿಗೆ ಮಾತ್ರವಲ್ಲ ಸಮಾಜಕ್ಕೂ ಮಾರಕವಾಗಿದೆ. ಅಮಲು ಭರಿಸುವ ಔಷಧಗಳನ್ನು ಯಾರು ಬೇಕಾದರೂ ವೈದ್ಯರ ಸೂಚನೆ ಇಲ್ಲದೆ ಖರೀದಿಸಬಹುದು' ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>