ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ವಿಜಯ ಗುಂಟ್ರಾಳ, ‘ಅಸಂಘಟಿತರಾದ ಪೌರ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಗ್ಯಾರೇಜ್ ಕೆಲಸಗಾರರು, ಆಟೊ ಡ್ರೈವರ್ಗಳು, ಬೀದಿ ವ್ಯಾಪಾರಿಗಳು, ರೈತರು ಸೇರಿದಂತೆ ನೂರಾರು ಬಗೆಯ ಕಾರ್ಮಿಕರು ದೇಶದ ಚಲನೆಗೆ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ. ಅಂತಹವರ ಬಗ್ಗೆ ತೇಜಸ್ವಿ ಸೂರ್ಯ ಅವರು ಕೀಳಾಗಿ ಮಾತನಾಡಿರುವುದು ಖಂಡನೀಯ’ ಎಂದರು.