‘ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿ ನರೇಂದ್ರ ಮೋದಿ ಸುಲಭವಾಗಿ ಸಮಸ್ಯೆ ಇತ್ಯರ್ಥ್ಯಗೊಳಿಸಬೇಕಿತ್ತು. ಈ ಕೆಲಸವನ್ನೂ ಮಾಡಿಲ್ಲ. ಈ ಬಾರಿಯ ಬಜೆಟ್ನಲ್ಲಿ ಎರಡು ಹೆಕ್ಟೇರ್ಗೆ ₹ 6,000 ನೀಡಲಾಗುವುದು ಎಂದು ಕೇಂದ್ರ ಹೇಳಿದೆ. ಆದರೆ, ಒಂದು ಎಕರೆ ಹೊಲದಲ್ಲಿ ಬಿತ್ತಲು ಕನಿಷ್ಠ ₹ 4,500ರಿಂದ ₹ 5,000 ಖರ್ಚಾಗುತ್ತದೆ. ಕೇಂದ್ರ ನೀಡುವ ಹಣ ಯಾವುದಕ್ಕೂ ಸಾಕಾಗುವುದಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.