ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಪರಿಶಿಷ್ಟರನ್ನು ಕಾಂಗ್ರೆಸ್ ತುಚ್ಛವಾಗಿ ಕಂಡಿದೆ. ಆದರೆ, ಬಿಜೆಪಿ ಅವರಿಗೆ ಗರಿಷ್ಠ ಅವಕಾಶ ನೀಡಿದೆ. ಪರಿಶಿಷ್ಟರು ಮತ್ತು ಮುಸ್ಲಿಮರನ್ನು ಕಾಂಗ್ರೆಸ್ ತನ್ನ ಮತಬ್ಯಾಂಕ್ಗಾಗಿ ಬಳಸಿಕೊಂಡಿತು. ಡಾ. ಬಿ.ಆರ್. ಅಂಬೇಡ್ಕರ್ ಅವರ ಶವಸಂಸ್ಕಾರಕ್ಕೆ ಕಾಲು ಎಕರೆ ಜಾಗ ಕೊಡಲಿಲ್ಲ. ಕಾಂಗ್ರೆಸ್ನಿಂದ ಪ್ರಧಾನಿಗಳಾದ ಜವಾಹರಲಾಲ್ ನೆಹರೂ, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಶವಸಂಸ್ಕಾರಕ್ಕೆ 15 ಎಕರೆ ಜಾಗ ನೀಡಲಾಗಿದೆ’ ಎಂದು ಟೀಕಿಸಿದರು.