ಈ ವೇಳೆ ಮಾತನಾಡಿದ ಹುಧಾ ಮಹಾನಗರ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ದೀಪಾ ಗೌರಿ, 'ಸರ್ಕಾರ ಪ್ರತಿಯೊಂದು ಕ್ಷೇತ್ರವನ್ನು ಖಾಸಗೀಕರಣ ಮಾಡುತ್ತಿದೆ. ಬಂಡವಾಳ ಶಾಹಿಗಳ ಕಪಿಮುಷ್ಠಿಗೆ ಸರ್ಕಾರಿ ಕ್ಷೇತ್ರಗಳನ್ನು ನೀಡಿ, ಬಡವರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದೆ. ಅಗತ್ಯ ಸೌಲಭ್ಯಗಳಲ್ಲಿ ಪ್ರಮುಖವಾದ ನೀರು ಪೂರೈಕೆಯನ್ನು ಸಹ ಖಾಸಗಿಯವರ ಕೈಗೆ ನೀಡಿ, ಬಡವರು ನೀರಿಗೂ ಪರದಾಡುವಂತೆ ಮಾಡುವ ಹುನ್ನಾರ ನಡೆಸಿದೆ' ಎಂದು ಆರೋಪಿಸಿದರು.