ಈ ವಿಷಯ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರು, ಸಂಬಂಧಪಟ್ಟ ಅಧಿಕಾರಿಗಳ ಜತೆ ಸಭೆ ನಡೆಸಬೇಕು. ನೀರು ಪೂರೈಕೆಯನ್ನು ಯಾವುದೇ ಕಾರಣಕ್ಕೂ ಖಾಸಗಿ ಕಂಪನಿಗೆ ವಹಿಸದೆ,ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯೇ ನಿರ್ವಹಿಸಲು ಸೂಚನೆ ನೀಡಬೇಕು. ಜತೆಗೆ, ನೌಕರರ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದಾರೆ.