ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಹಾ ಕೊಲೆ ಪ್ರಕರಣ: ಗೃಹ ಸಚಿವರ ಕ್ಷಮೆಗೆ ಆಗ್ರಹ- ಶವ ಇಟ್ಟು ಪ್ರತಿಭಟನೆ

Published 19 ಏಪ್ರಿಲ್ 2024, 8:15 IST
Last Updated 19 ಏಪ್ರಿಲ್ 2024, 8:15 IST
ಅಕ್ಷರ ಗಾತ್ರ

ಹುಬ್ಬಳ್ಳಿ: 'ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಆಕಸ್ಮಿಕ ಎಂದು ಹೇಳಿಕೆ ನೀಡಿರುವ ಗೃಹ ಸಚಿವ ಜಿ. ಪರಮೇಶ್ವರ ಅವರು, ಕೂಡಲೇ ಕ್ಷಮೆಯಾಚಿಸಬೇಕು' ಎಂದು ಬಿನೆಪಿ ಹಾಗೂ ವಿವಿಧ ಹಿಂದೂ ಸಂಘಟನೆಗಳು ಆಗ್ರಹಿಸಿವೆ.

ನಗರದ ಎರಡೆತ್ತಿನಮಠದ ಎದುರು ನೇಹಾ ಅವರ ಪಾರ್ಥಿವ ಶವ ಇಟ್ಟು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, 'ಜವಾಬ್ದಾರಿ ಸ್ಥಾನದಲ್ಲಿರುವ ಸಚಿವರು, ಬೇಜವಾಬ್ದಾರಿ ಹೇಳಿಕೆ ನೀಡಿದ್ದು ಖಂಡನೀಯ. ವಿದ್ಯಾರ್ಥಿನಿ ಸಾವಿನಲ್ಲೂ ರಾಜಕೀಯ ಮಾಡುತ್ತಿದ್ದಾರೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, 'ಲವ್ ಜಿಹಾದ್ ಮತ್ತು ಭಯೋತ್ಪಾದಕರನ್ನು ನೀವು ಬ್ರದರ್ಸ್ ಎನ್ನುತ್ತೀರಿ. ಆಕಸ್ಮಿಕ ಎನ್ನಲು ಇದು ಅಪಘಾತವೇ? ಪ್ರೀತಿ ಮಾಡುವುದಿಲ್ಲ ಎಂದರೆ ಕೊಲೆ ಮಾಡಬೇಕೆ? ಗೃಹ ಸಚಿವರು ತಮ್ಮ ಹೇಳಿಕೆಗೆ ತಕ್ಷಣ ಕ್ಷಮೆ ಯಾಚಿಸಬೇಕು' ಎಂದು ಒತ್ತಾಯಿಸಿದರು.

ಬಿಜೆಪಿ ಮುಖಂಡರಾದ ಪ್ರಭು ನವಲಗುಂದಮಠ, ಅನೂಫ್ ಬಿಜವಾಡ,‌ ಚಂದ್ರಶೇಖರ ಗೋಕಾಕ, ಅಮೃತ ಹಿರೇಮಠ, ಚನ್ನಯ್ಯ ಚೌಕಿಮಠ, ಶಿವಯ್ಯ ಹಿತೇಮಠ ಸೇರಿದಂತೆ ಅನೇಕ ಬಿಜೆಪಿ ಕಾರ್ಯಕರ್ತರು ಸ್ಥಳೀಯರು ನೇಹಾ ಅಂತ್ಯಕ್ರಿಯೆ ಮೆರವಣಿಗೆಯಲ್ಲಿ‌‌ ಪಾಲ್ಗೊಂಡಿದ್ದಾರೆ. ಮಂಟೂರು ರಸ್ತೆಯ ಕಲಬುರ್ಗಿ ಮಠದ ಬಳಿಯಿರುವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT