ಹುಬ್ಬಳ್ಳಿ: ಬೆಂಗಳೂರು ಪುಣೆ ರಾಷ್ಟ್ರೀಯ ಹೆದ್ದಾರಿ ಯ ಹುಬ್ಬಳ್ಳಿ ಧಾರವಾಡ ನಡುವಿನ ರಸ್ತೆ ವಿಸ್ತರಣೆ ಮಾಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಹುಬ್ಬಳ್ಳಿಯ ಗಬ್ಬೂರ ಕ್ರಾಸ್ ಬಳಿಯ ಟೊಲ್ ನಾಕಾದಲ್ಲಿ ಪ್ರತಿಭಟನೆ ಮಾಡಿದರು.
ರಸ್ತೆ ತಡೆ ನಡೆಸಿದ್ದರಿಂದ ವಾಹನಗಳು ಸಾಲುಗಟ್ಡಿ ನಿಂತಿದ್ದವು. ಟೋಲ್ ಸಂಗ್ರಹಕ್ಕೂ ವಿರೋಧ ವ್ಯಕ್ತಪಡಿಸಿದರು. ಬೆಂಗಳೂರು ಪುಣೆ ರಸ್ತೆ ಇಲ್ಲಿ ಮಾತ್ರ ದ್ವಿಪಥವಾಗಿದೆ. ಇದರಿಂದ ಅಪಘಾತ ಸಂಭವಿಸಿ ಜನರು ಪ್ರಾಣ ಕಳೆದುಕೊಳ್ಳುವಂತಾಗಿದೆ. ಕೂಡಲೇ ಅದನ್ನು ಚತುಷ್ಪಥ ರಸ್ತೆಯಾಗಿ ವಿಸ್ತರಿಸಬೇಕು ಎಂದು ಆಗ್ರಹಿಸಿದರು.