ಅಳ್ನಾವರ: ಇಲ್ಲಿನ ಕೆಇಬಿ ಗ್ರೀಡ್ ಬಳಿ ಹಲವಾರು ಶಾಲಾ, ಕಾಲೇಜುಗಳು ಇವೆ. ನಿತ್ಯ ಸಾವಿರಾರು ವಿದ್ಯಾರ್ಥಿಗಳು ಇಲ್ಲಿಗೆ ಬರುತ್ತಾರೆ. ಆದರೆ ಬಸ್ ನಿಲುಗಡೆ ಇಲ್ಲದೆ ಪರದಾಡುವಂತಾಗಿದೆ.
ಈ ಮಾರ್ಗವಾಗಿ ಚಲಿಸುವ ಎಲ್ಲ ಬಸ್ಗಳು ಇಲ್ಲಿ ನಿಲ್ಲಬೇಕು ಎಂದು ಆಗ್ರಹಿಸಿ ಮಂಗಳವಾರ ಪ್ರತಿಭಟನೆ ನಡೆಯಿತು. ಅಳ್ನಾವರ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳು ಇಲ್ಲಿಗೆ ಬರಲು ಎರಡು ಕಿ.ಮೀ. ನಡೆದುಕೊಂಡು ಬರಬೇಕಾದ ಪರಿಸ್ಥಿತಿಯಿದೆ.
‘ನಮಗೆಲ್ಲ ಬಸ್ ಪಾಸ್ ಇದೆ. ಸ್ಥಳೀಯ ಬಸ್ಗಳು ಮಾತ್ರ ನಿಲ್ಲುತ್ತವೆ. ವೇಗದೂತ ಹಾಗೂ ಎಲ್ಲ ಬಸ್ಗಳನ್ನು ನಿಲ್ಲಿಸಬೇಕು’ ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು. ಪ್ರತಿಭಟನಾ ಸ್ಥಳಕ್ಕೆ ಬಂದ ಹಳಿಯಾಳ ಬಸ್ ಡಿಪೊ ವ್ಯವಸ್ಥಾಪಕ ಸಮಸ್ಯೆ ಆಲಿಸಿ ಸೂಕ್ತ ಕ್ರಮದ ಭರವಸೆ ನೀಡಿದರು.