<p><strong>ಹುಬ್ಬಳ್ಳಿ</strong>: ಕೇಶ್ವಾಪುರದ ಸೇಂಟ್ ಮೈಕಲ್ ಸ್ಕೂಲ್ ಬಳಿ ರಸ್ತೆ ತೀರಾ ಹದಗೆಟ್ಟಿದ್ದು, ಸಾರ್ವಜನಿಕರ ಸಂಚಾರಕ್ಕೆ ತೊಂದರೆ<br />ಯಾಗುತ್ತಿದೆ. ಕೂಡಲೇ ಅಭಿವೃದ್ಧಿ ಪಡಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು, ಬಧುವಾರ ರಸ್ತೆ ಮೇಲೆ ರಂಗೋಲಿ ಬಿಡಿಸಿ ಪ್ರತಿಭಟನೆ ಮಾಡಿದರು.</p>.<p>ಒಳಚರಂಡಿ ಕಾಮಗಾರಿ ಪೂರ್ಣಗೊಂಡು ವರ್ಷ ಕಳೆದಿದೆ. ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ಹಾಗೂ ಶಾಸಕ ಜಗದೀಶ ಶೆಟ್ಟರ್ ಅವರಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಲಾಗಿದೆ. ಅವರ ನಿರ್ಲಕ್ಷದಿಂದ ಸಾರ್ವಜನಿಕರು ಸಮಸ್ಯೆ ಅನುಭವಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ರಸ್ತೆ ಅಭಿವೃದ್ಧಿ ಮಾಡುತ್ತಿಲ್ಲ. ಬ್ಯಾಂಕ್ಗಳು, ಹೋಟೆಲ್ಗಳು, ಶಾಲಾ–ಕಾಲೇಜುಗಳು ಈ ಪ್ರದೇಶದಲ್ಲಿದ್ದು, ಹದಗೆಟ್ಟ ರಸ್ತೆಯಿಂದ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಹೇಳಿದರು.</p>.<p>ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ, ಸಂತೋಷ ಚಲವಾದಿ, ಹೂವಪ್ಪ ದಾಯಗೋಡಿ, ತೇಜರಾಜ್ ಜೈನ್, ಪ್ರೀತೇಶ ಪಾಲ್ಗೋಟ, ಸುರೇಶ, ಅಶೋಕ ನರಗುಂದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಕೇಶ್ವಾಪುರದ ಸೇಂಟ್ ಮೈಕಲ್ ಸ್ಕೂಲ್ ಬಳಿ ರಸ್ತೆ ತೀರಾ ಹದಗೆಟ್ಟಿದ್ದು, ಸಾರ್ವಜನಿಕರ ಸಂಚಾರಕ್ಕೆ ತೊಂದರೆ<br />ಯಾಗುತ್ತಿದೆ. ಕೂಡಲೇ ಅಭಿವೃದ್ಧಿ ಪಡಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು, ಬಧುವಾರ ರಸ್ತೆ ಮೇಲೆ ರಂಗೋಲಿ ಬಿಡಿಸಿ ಪ್ರತಿಭಟನೆ ಮಾಡಿದರು.</p>.<p>ಒಳಚರಂಡಿ ಕಾಮಗಾರಿ ಪೂರ್ಣಗೊಂಡು ವರ್ಷ ಕಳೆದಿದೆ. ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ಹಾಗೂ ಶಾಸಕ ಜಗದೀಶ ಶೆಟ್ಟರ್ ಅವರಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಲಾಗಿದೆ. ಅವರ ನಿರ್ಲಕ್ಷದಿಂದ ಸಾರ್ವಜನಿಕರು ಸಮಸ್ಯೆ ಅನುಭವಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ರಸ್ತೆ ಅಭಿವೃದ್ಧಿ ಮಾಡುತ್ತಿಲ್ಲ. ಬ್ಯಾಂಕ್ಗಳು, ಹೋಟೆಲ್ಗಳು, ಶಾಲಾ–ಕಾಲೇಜುಗಳು ಈ ಪ್ರದೇಶದಲ್ಲಿದ್ದು, ಹದಗೆಟ್ಟ ರಸ್ತೆಯಿಂದ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಹೇಳಿದರು.</p>.<p>ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ, ಸಂತೋಷ ಚಲವಾದಿ, ಹೂವಪ್ಪ ದಾಯಗೋಡಿ, ತೇಜರಾಜ್ ಜೈನ್, ಪ್ರೀತೇಶ ಪಾಲ್ಗೋಟ, ಸುರೇಶ, ಅಶೋಕ ನರಗುಂದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>