<p><strong>ಧಾರವಾಡ:</strong> ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಹಾಗೂ ಗ್ರಾಮೀಣ ಘಟಕದವರು ಜುಬಿಲಿ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>‘ಸರ್ಕಾರದ ನಿರ್ಲಕ್ಷ್ಯದಿಂದ ವಿಜಯೋತ್ಸವ ಸಮಯದಲ್ಲಿ ದುರಂತ ಸಂಭವಿಸಿದೆ. ಕಾಲ್ತುಳಿತದಲ್ಲಿ 11 ಮಂದಿ ಸಾವಿಗೀಡಾಗಿದ್ದಾರೆ. ಮುಂಜಾಗ್ರತೆ ವಹಿಸದೆ ತರಾತುರಿಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದೇ ದುರಂತಕ್ಕೆ ಕಾರಣ’ ಎಂದು ಪ್ರತಿಭಟನಕಾರರು ದೂರಿದರು.</p>.<p>`ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಹಾಕಲು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದೆ. ತಪ್ಪಿಸ್ಥರ ವಿರುದ್ಧ ರಾಜ್ಯಪಾಲರು ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಪಾಲಿಕೆ ಸದಸ್ಯರಾದ ಶಿವು ಹೀರೆಮಠ, ವಿಜಯಾನಂದ ಶಟ್ಟಿ, ಈರಣ್ಣ ಹಪಳಿ, ಶಂಕರ ಶೇಳಕೆ, ಮಂಜುನಾಥ ಗಾಮನಗಟ್ಟು, ಮೋಹನ ರಾಮದುರ್ಗ, ಅಮಿತ ಪಾಟೀಲ್, ಶ್ರೀನಿವಾಸ ಕೊಟ್ಯಾನ್, ರಾಕೇಶ ನಾಝರೆ, ಸುರೇಶ ಬೆದರೆ, ಸುನೀಲ್ ಮೋರೆ, ಬಸವರಾಜ ಬಾಳಗಿ, ರಮೇಶ ದೊಡ್ಡವಾಡ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಹಾಗೂ ಗ್ರಾಮೀಣ ಘಟಕದವರು ಜುಬಿಲಿ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>‘ಸರ್ಕಾರದ ನಿರ್ಲಕ್ಷ್ಯದಿಂದ ವಿಜಯೋತ್ಸವ ಸಮಯದಲ್ಲಿ ದುರಂತ ಸಂಭವಿಸಿದೆ. ಕಾಲ್ತುಳಿತದಲ್ಲಿ 11 ಮಂದಿ ಸಾವಿಗೀಡಾಗಿದ್ದಾರೆ. ಮುಂಜಾಗ್ರತೆ ವಹಿಸದೆ ತರಾತುರಿಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದೇ ದುರಂತಕ್ಕೆ ಕಾರಣ’ ಎಂದು ಪ್ರತಿಭಟನಕಾರರು ದೂರಿದರು.</p>.<p>`ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಹಾಕಲು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದೆ. ತಪ್ಪಿಸ್ಥರ ವಿರುದ್ಧ ರಾಜ್ಯಪಾಲರು ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಪಾಲಿಕೆ ಸದಸ್ಯರಾದ ಶಿವು ಹೀರೆಮಠ, ವಿಜಯಾನಂದ ಶಟ್ಟಿ, ಈರಣ್ಣ ಹಪಳಿ, ಶಂಕರ ಶೇಳಕೆ, ಮಂಜುನಾಥ ಗಾಮನಗಟ್ಟು, ಮೋಹನ ರಾಮದುರ್ಗ, ಅಮಿತ ಪಾಟೀಲ್, ಶ್ರೀನಿವಾಸ ಕೊಟ್ಯಾನ್, ರಾಕೇಶ ನಾಝರೆ, ಸುರೇಶ ಬೆದರೆ, ಸುನೀಲ್ ಮೋರೆ, ಬಸವರಾಜ ಬಾಳಗಿ, ರಮೇಶ ದೊಡ್ಡವಾಡ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>