<p><strong>ಹುಬ್ಬಳ್ಳಿ:</strong> ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ನೇತೃತ್ವದಲ್ಲಿ ಕಾರ್ಮಿಕರು ಹುಬ್ಬಳ್ಳಿಯ ತಹಶೀಲ್ದಾರ್ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ತಹಶೀಲ್ದಾರ್ ಕಚೇರಿ ಎದುರು ಸೇರಿದ ಪ್ರತಿಭಟನಕಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. </p>.<p>‘ಕೇಂದ್ರ ಸರ್ಕಾರ ಕಾರ್ಮಿಕ ವರ್ಗದ ತೀವ್ರ ವಿರೋಧದ ಮಧ್ಯೆ ದೇಶವನ್ನು ಲೂಟಿ ಮಾಡಲು, ಕಾರ್ಪೊರೇಟ್ ವಲಯಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಈಗಾಗಲೇ ದೇಶದಲ್ಲಿ ಜಾರಿಯಲ್ಲಿರುವ 34 ಕಾರ್ಮಿಕ ಕಾನೂನುಗಳನ್ನು ಒಟ್ಟುಗೂಡಿಸಿ 4 ಕಾರ್ಮಿಕ ಸಂಹಿತೆಗಳನ್ನು (ಕೋಡ್) ಜಾರಿ ಮಾಡಲು ಹೊರಟಿದೆ. ಇದು ಖಂಡನೀಯ’ ಎಂದು ಸಿಐಟಿಯು ರಾಜ್ಯ ಘಟಕದ ಕಾರ್ಯದರ್ಶಿ ಮಹೇಶ ಪತ್ತಾರ ಹೇಳಿದರು.</p>.<p>‘ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕರ ಜಾರಿ ಮಾಡಲು ಹೊರಟಿರುವ ಈ ನಾಲ್ಕು ಕಾರ್ಮಿಕ ಸಂಹಿತೆಗಳು ಕಾರ್ಮಿಕರನ್ನು ನವಗುಲಾಮಗಿರಿಗೆ ತಳ್ಳುತ್ತವೆ. ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ಕಾರ್ಮಿಕರ ಸಂಘಟನೆಯ ಹಕ್ಕು, ಮುಷ್ಕರದ ಹಕ್ಕು, ಕನಿಷ್ಠ ವೇತನ, ಕೆಲಸದ ಅವಧಿ, ಸಾಮಾಜಿಕ, ಆರ್ಥಿಕ ಭದ್ರತೆ ಹಕ್ಕುಗಳನ್ನು ಕಸಿದುಕೊಳ್ಳುವ ಹುನ್ನಾರ ನಡೆಯುತ್ತಿದೆ’ ಎಂದು ಅಕ್ರೋಶ ವ್ಯಕ್ತಪಡಿಸಿದರು.</p>.<p>ಟಿಯುಸಿಸಿ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ಬಾರ್ಕಿ, ಎಐಟಿಯುಸಿ ಮುಖಂಡ ಎ.ಎಸ್. ಪೀರಜಾದೆ, ವಿಮಾ ನೌಕರರ ಮುಖಂಡ ಬಿ.ಎನ್. ಪೂಜಾರಿ, ಎಐಯುಟಿಯುಸಿ ಮುಖಂಡ ಗಂಗಾಧರ ಬಡಿಗೇರ ಮಾತನಾಡಿದರು.</p>.<p>ಮುಖಂಡರಾದ ಎಂ.ಎಚ್. ಮುಲ್ಲಾ, ಎ.ಎಂ. ಖಾನ್, ಗುರುಸಿದ್ದಪ್ಪ ಅಂಬಿಗೇರ, ಹನಮಂತ ಅಂಬಿಗೇರ, ಗಾಳೆಪ್ಪ ಮುತ್ಯಾಳ, ಭುವನಾ ಬಳ್ಳಾರಿ, ಕತಾಲಸಾಬ ಮುಲ್ಲಾ, ಶ್ರಮಜೀವಿ ಅಟೊರೀಕ್ಷಾ ಚಾಲಕರ ಸಂಘದ ಚಿದಾನಂದ ಸವದತ್ತಿ, ಪುಂಡಲೀಕ ಬಡಿಗೇರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ನೇತೃತ್ವದಲ್ಲಿ ಕಾರ್ಮಿಕರು ಹುಬ್ಬಳ್ಳಿಯ ತಹಶೀಲ್ದಾರ್ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ತಹಶೀಲ್ದಾರ್ ಕಚೇರಿ ಎದುರು ಸೇರಿದ ಪ್ರತಿಭಟನಕಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. </p>.<p>‘ಕೇಂದ್ರ ಸರ್ಕಾರ ಕಾರ್ಮಿಕ ವರ್ಗದ ತೀವ್ರ ವಿರೋಧದ ಮಧ್ಯೆ ದೇಶವನ್ನು ಲೂಟಿ ಮಾಡಲು, ಕಾರ್ಪೊರೇಟ್ ವಲಯಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಈಗಾಗಲೇ ದೇಶದಲ್ಲಿ ಜಾರಿಯಲ್ಲಿರುವ 34 ಕಾರ್ಮಿಕ ಕಾನೂನುಗಳನ್ನು ಒಟ್ಟುಗೂಡಿಸಿ 4 ಕಾರ್ಮಿಕ ಸಂಹಿತೆಗಳನ್ನು (ಕೋಡ್) ಜಾರಿ ಮಾಡಲು ಹೊರಟಿದೆ. ಇದು ಖಂಡನೀಯ’ ಎಂದು ಸಿಐಟಿಯು ರಾಜ್ಯ ಘಟಕದ ಕಾರ್ಯದರ್ಶಿ ಮಹೇಶ ಪತ್ತಾರ ಹೇಳಿದರು.</p>.<p>‘ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕರ ಜಾರಿ ಮಾಡಲು ಹೊರಟಿರುವ ಈ ನಾಲ್ಕು ಕಾರ್ಮಿಕ ಸಂಹಿತೆಗಳು ಕಾರ್ಮಿಕರನ್ನು ನವಗುಲಾಮಗಿರಿಗೆ ತಳ್ಳುತ್ತವೆ. ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ಕಾರ್ಮಿಕರ ಸಂಘಟನೆಯ ಹಕ್ಕು, ಮುಷ್ಕರದ ಹಕ್ಕು, ಕನಿಷ್ಠ ವೇತನ, ಕೆಲಸದ ಅವಧಿ, ಸಾಮಾಜಿಕ, ಆರ್ಥಿಕ ಭದ್ರತೆ ಹಕ್ಕುಗಳನ್ನು ಕಸಿದುಕೊಳ್ಳುವ ಹುನ್ನಾರ ನಡೆಯುತ್ತಿದೆ’ ಎಂದು ಅಕ್ರೋಶ ವ್ಯಕ್ತಪಡಿಸಿದರು.</p>.<p>ಟಿಯುಸಿಸಿ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ಬಾರ್ಕಿ, ಎಐಟಿಯುಸಿ ಮುಖಂಡ ಎ.ಎಸ್. ಪೀರಜಾದೆ, ವಿಮಾ ನೌಕರರ ಮುಖಂಡ ಬಿ.ಎನ್. ಪೂಜಾರಿ, ಎಐಯುಟಿಯುಸಿ ಮುಖಂಡ ಗಂಗಾಧರ ಬಡಿಗೇರ ಮಾತನಾಡಿದರು.</p>.<p>ಮುಖಂಡರಾದ ಎಂ.ಎಚ್. ಮುಲ್ಲಾ, ಎ.ಎಂ. ಖಾನ್, ಗುರುಸಿದ್ದಪ್ಪ ಅಂಬಿಗೇರ, ಹನಮಂತ ಅಂಬಿಗೇರ, ಗಾಳೆಪ್ಪ ಮುತ್ಯಾಳ, ಭುವನಾ ಬಳ್ಳಾರಿ, ಕತಾಲಸಾಬ ಮುಲ್ಲಾ, ಶ್ರಮಜೀವಿ ಅಟೊರೀಕ್ಷಾ ಚಾಲಕರ ಸಂಘದ ಚಿದಾನಂದ ಸವದತ್ತಿ, ಪುಂಡಲೀಕ ಬಡಿಗೇರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>