<p><strong>ಧಾರವಾಡ:</strong> ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಮನಸೂರ ರೇವಣಸಿದ್ಧೇಶ್ವರ ಮಠದ ಬಸವರಾಜ ದೇವರಿಗೆ ಅಗೌರವ ತೋರಿರುವ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿ ಹಾಲುಮತ ಮಹಾಸಭಾ ಮತ್ತು ರಾಯಣ್ಣನ ಅಭಿಮಾನಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಸಚಿವ ಸಂತೋಷ ಲಾಡ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಜನವರಿ 26 ರಂದು ಹುತಾತ್ಮ ದಿನಾಚರಣೆ ಅಂಗವಾಗಿ ಹಾಲುಮತ ಸಮಾಜದವರು ಬಸವರಾಜ ದೇವರ ಸಾನ್ನಿಧ್ಯದಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಾಯಣ್ಣನ ಚಿತ್ರಕ್ಕೆ ಪೂಜೆ ಸಲ್ಲಿಸುತ್ತಿದ್ದರು.<br>ಸಮೀಪದ ಹೋಟೆಲ್ಗೆ ಆಗಮಿಸಿದ್ದ ಸಚಿವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು. ಆದರೆ, ಅವರು ಏಕವಚನದಲ್ಲಿ ಮಾತನಾಡಿ, ಸ್ವಾಮೀಜಿ ಮತ್ತು ಆಯೋಜಕರಿಗೆ ಅಪಮಾನ ಮಾಡಿದರು’ ಎಂದು ಪ್ರತಿಭಟನಕಾರರು ದೂರಿದರು. </p>.<p>‘ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು ಹಾಗೂ ಬಸವರಾಜ ದೇವರ ಬಳಿ ಸಚಿವರು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.</p>.<p>ಹಾಲುಮತ ಮಹಾಸಭಾದ ಅಧ್ಯಕ್ಷ ರುದ್ರಣ್ಣ ಗುಳಗುಳಿ, ರವಿ ದಂಡಿನ, ದೇವರಾಜ ಕಂಬಳಿ, ಉದ್ಯಮಿ ಮಂಜುನಾಥ ಮಕ್ಕಳಗೇರಿ, ರಾಜೇಶ್ವರಿ ಸಾಲಗಟ್ಟಿ, ರಾಯಪ್ಪ ಐರಣಿ, ಶಿವು ಬೆಳಾರದ, ಡಿ.ಟಿ.ಪಾಟೀಲ, ಮಡಿವಾಳಪ್ಪ ಬಿದರಗಡ್ಡಿ, ರವಿ ಪಾಟೀಲ, ಬಸವರಾಜ ನಾಯ್ಕರ, ಮಂಜುನಾಥ ನಡಟ್ಟಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಮನಸೂರ ರೇವಣಸಿದ್ಧೇಶ್ವರ ಮಠದ ಬಸವರಾಜ ದೇವರಿಗೆ ಅಗೌರವ ತೋರಿರುವ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿ ಹಾಲುಮತ ಮಹಾಸಭಾ ಮತ್ತು ರಾಯಣ್ಣನ ಅಭಿಮಾನಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಸಚಿವ ಸಂತೋಷ ಲಾಡ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಜನವರಿ 26 ರಂದು ಹುತಾತ್ಮ ದಿನಾಚರಣೆ ಅಂಗವಾಗಿ ಹಾಲುಮತ ಸಮಾಜದವರು ಬಸವರಾಜ ದೇವರ ಸಾನ್ನಿಧ್ಯದಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಾಯಣ್ಣನ ಚಿತ್ರಕ್ಕೆ ಪೂಜೆ ಸಲ್ಲಿಸುತ್ತಿದ್ದರು.<br>ಸಮೀಪದ ಹೋಟೆಲ್ಗೆ ಆಗಮಿಸಿದ್ದ ಸಚಿವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು. ಆದರೆ, ಅವರು ಏಕವಚನದಲ್ಲಿ ಮಾತನಾಡಿ, ಸ್ವಾಮೀಜಿ ಮತ್ತು ಆಯೋಜಕರಿಗೆ ಅಪಮಾನ ಮಾಡಿದರು’ ಎಂದು ಪ್ರತಿಭಟನಕಾರರು ದೂರಿದರು. </p>.<p>‘ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು ಹಾಗೂ ಬಸವರಾಜ ದೇವರ ಬಳಿ ಸಚಿವರು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.</p>.<p>ಹಾಲುಮತ ಮಹಾಸಭಾದ ಅಧ್ಯಕ್ಷ ರುದ್ರಣ್ಣ ಗುಳಗುಳಿ, ರವಿ ದಂಡಿನ, ದೇವರಾಜ ಕಂಬಳಿ, ಉದ್ಯಮಿ ಮಂಜುನಾಥ ಮಕ್ಕಳಗೇರಿ, ರಾಜೇಶ್ವರಿ ಸಾಲಗಟ್ಟಿ, ರಾಯಪ್ಪ ಐರಣಿ, ಶಿವು ಬೆಳಾರದ, ಡಿ.ಟಿ.ಪಾಟೀಲ, ಮಡಿವಾಳಪ್ಪ ಬಿದರಗಡ್ಡಿ, ರವಿ ಪಾಟೀಲ, ಬಸವರಾಜ ನಾಯ್ಕರ, ಮಂಜುನಾಥ ನಡಟ್ಟಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>