ಗುರುವಾರ, 10 ಜುಲೈ 2025
×
ADVERTISEMENT
ADVERTISEMENT

ಹುಬ್ಬಳ್ಳಿ | ಕಾರ್ಮಿಕ ಸಂಹಿತೆ ಹಿಂಪಡೆಯಲು ಆಗ್ರಹ: ತಹಶೀಲ್ದಾರ್‌ಗೆ ಮನವಿ

Published : 10 ಜುಲೈ 2025, 5:04 IST
Last Updated : 10 ಜುಲೈ 2025, 5:04 IST
ಫಾಲೋ ಮಾಡಿ
Comments
ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಗದೀಕರಣ ನಿಲ್ಲಬೇಕು. ಕನಿಷ್ಠ ವೇತನ ಸಾರ್ವತ್ರಿಕ ಪಿಂಚಣಿ ಸಾಮಾಜಿಕ ಭದ್ರತೆ ಜಾರಿಗೊಳಿಸಬೇಕು
ಆರ್.ಎಫ್. ಕವಳಿಕಾಯಿ ಕಾರ್ಮಿಕ ಮುಖಂಡ
ರಾಜ್ಯ ಸರ್ಕಾರದ ವಿರುದ್ಧವೂ ಆಕ್ರೋಶ
‘ನೂತನ ಕಾರ್ಮಿಕ ಸಂಹಿತೆಗಳನ್ನು ರಾಜ್ಯದಲ್ಲಿ ಜಾರಿ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಕೂಡಲೇ ಘೋಷಣೆ ಮಾಡಬೇಕು. ಕೆಲಸದ ಅವಧಿಯನ್ನು 10 ತಾಸು ಮಾಡಿದ್ದು ಅದನ್ನು ಸಹ ವಾಪಸ್‌ ಪಡೆದು ಎಂಟು ಗಂಟೆಗೆ ಇಳಿಸಬೇಕು’ ಎಂದು ಕಾರ್ಮಿಕ ಮುಖಂಡ ಗಂಗಾಧರ ಬಡಿಗೇರ ಆಗ್ರಹಿಸಿದರು. ‘ಕನಿಷ್ಠ ವೇತನ ಪರಿಷ್ಕರಣೆಗೆ ಲಾಡ್‌ ಅವರು ಮುಂದಾಗಿದ್ದು ಇನ್ನೂ ಜಾರಿಗೆ ಬಂದಿಲ್ಲ. ಅಂಬೇಡ್ಕರ್‌ ಬಸವಣ್ಣನವರ ತತ್ವಗಳ ಬಗ್ಗೆ ಮಾತನಾಡುವ ಅವರು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿರುವ ಕಾರ್ಮಿಕ ಸಂಹಿತೆ ವಿರುದ್ಧ ದನಿ ಎತ್ತುತ್ತಿಲ್ಲ. ಈ ನಡುವೆ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರುತ್ತ ಸಂಹಿತೆ ಅನುಷ್ಠಾನಗೊಳಿಸಲು ಯತ್ನಿಸುತ್ತಿದೆ’ ಎಂದು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT