ಹುಬ್ಬಳ್ಳಿ: ಬಿಆರ್ಟಿಎಸ್ ಕಂಪನಿಯು ಸಾರಿಗೆ ಸೇವೆಯನ್ನು ನಡೆಸುವಲ್ಲಿ ಯಾವುದೇ ಅನುಭವ ಹೊಂದಿಲ್ಲ. ಹಾಗಾಗಿ, ಬಿಆರ್ಟಿಎಸ್ ಕಂಪನಿಯ ಬದಲು ಸಾರಿಗೆ ಸೇವೆಯ ನಿರ್ವಹಣೆಯನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿಗೇ ನೀಡಬೇಕು ಎಂದು ಒತ್ತಾಯಿಸಿ ಕೆಎಸ್ಆರ್ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಯೂನಿಯನ್ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.