<p><strong>ಧಾರವಾಡ:</strong> ಹುಬ್ಬಳ್ಳಿ–ಧಾರವಾಡದಲ್ಲಿ ಪೆಟ್ರೋಲ್, ಡೀಸೆಲ್ ಪೂರೈಕೆ ಟ್ಯಾಂಕರ್ ಸಂಚಾರಕ್ಕೆ ವಿಧಿಸಿದ ನಿರ್ಬಂಧ ತೆರವಿಗೆ ಆಗ್ರಹಿಸಿ ಐಒಸಿಎಲ್ ಮತ್ತು ಎಚ್ಪಿಸಿಎಲ್ ಟ್ರಾನ್ಸ್ಪೋರ್ಟರ್ ಕಂಟ್ರಾಕ್ಟರ್ಸ್ ಸಂಘಟನೆ ಮತ್ತು ಉತ್ತರ ಕರ್ನಾಟಕ ಟ್ಯಾಂಕರ್ ಡ್ರೈವರ್ಸ್ ಅಂಡ್ ಹೆಲ್ಪರ್ಸ್ ಸಂಘದವರು ಶನಿವಾರ ಟ್ಯಾಂಕರ್ ಸಂಚಾರ ಸ್ಥಗಿತಗೊಳಿಸಿ, ಪ್ರತಿಭಟನೆ ಆರಂಭಿಸಿದರು.</p>.<p>‘ಬೆಳಿಗ್ಗೆ 8 ರಿಂದ ಮಧ್ಯಾಹ್ನ 12 ಮತ್ತು ಮಧ್ಯಾಹ್ನ 4 ರಿಂದ ರಾತ್ರಿ 9ರವರೆಗಿನ ಅವಧಿಯಲ್ಲಿ ಟ್ಯಾಂಕರ್ಗಳಿಗೆ ಹುಬ್ಬಳ್ಳಿ–ಧಾರವಾಡ ಪ್ರವೇಶಿಸಲು ನಿರ್ಬಂಧಿಸಿರುವುದನ್ನು ತೆರವುಗೊಳಿಸಬೇಕು. ಶನಿವಾರ ಟ್ಯಾಂಕರ್ಗಳಿಗೆ ಇಂಧನ ತುಂಬಿಸಿಲ್ಲ. ಡಿಪೊ, ಸ್ಟೇಷನ್ಗಳಲ್ಲಿ ಇಂಧನ ದಾಸ್ತಾನು ಇರುವುದರಿಂದ ಸದ್ಯಕ್ಕೆ ಸಮಸ್ಯೆಯಾಗಿಲ್ಲ. ಬೇಡಿಕೆ ಈಡೇರಿಸುವವರೆಗೆ ನಾವು ಪ್ರತಿಭಟನೆ ಮುಂದುವರೆಸುತ್ತೇವೆ’ ಎಂದು ಸಂಘಟನೆಯ ಮುಖಂಡ ಮೂರ್ತಿಮಮದಾಪುರ ತಿಳಿಸಿದರು.</p>.<p>‘ನಮ್ಮ ಸಾರಿಗೆ ಡಿಪೊಗಳಲ್ಲಿ ಇಂಧನ ದಾಸ್ತಾನು ಇದೆ. ಬಸ್ಗಳ ಸಂಚಾರಕ್ಕೆ ಇಂಧನ ಕೊರತೆ ಇಲ್ಲ. ಹಾಸನದಿಂದ ಇಂಧನ ಪೂರೈಕೆಗೆ ಮುಂಜಾಗ್ರತೆಯಾಗಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ’ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್ಡಬ್ಲ್ಯುಕೆಆರ್ಟಿಸಿ) ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ. ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಧಾರವಾಡದ ರಾಯಪುರದಲ್ಲಿ ಟ್ಯಾಂಕರ್ಗಳಲ್ಲಿ ಇಂಧನ ತುಂಬಿಸಿ ಹುಬ್ಬಳ್ಳಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ,. ಹೊಸಪೇಟೆ, ಬಳ್ಳಾರಿ, ರಾಯಚೂರು, ಬೆಳಗಾವಿ, ವಿಜಯಪುರ, ಕಾರವಾರ, ಬಾಗಲಕೋಟೆ, ಶಿವಮೊಗ್ಗ ಮತ್ತು ದಾವಣಗೆರೆಗೆ ನಿತ್ಯ ಕಳುಹಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ಹುಬ್ಬಳ್ಳಿ–ಧಾರವಾಡದಲ್ಲಿ ಪೆಟ್ರೋಲ್, ಡೀಸೆಲ್ ಪೂರೈಕೆ ಟ್ಯಾಂಕರ್ ಸಂಚಾರಕ್ಕೆ ವಿಧಿಸಿದ ನಿರ್ಬಂಧ ತೆರವಿಗೆ ಆಗ್ರಹಿಸಿ ಐಒಸಿಎಲ್ ಮತ್ತು ಎಚ್ಪಿಸಿಎಲ್ ಟ್ರಾನ್ಸ್ಪೋರ್ಟರ್ ಕಂಟ್ರಾಕ್ಟರ್ಸ್ ಸಂಘಟನೆ ಮತ್ತು ಉತ್ತರ ಕರ್ನಾಟಕ ಟ್ಯಾಂಕರ್ ಡ್ರೈವರ್ಸ್ ಅಂಡ್ ಹೆಲ್ಪರ್ಸ್ ಸಂಘದವರು ಶನಿವಾರ ಟ್ಯಾಂಕರ್ ಸಂಚಾರ ಸ್ಥಗಿತಗೊಳಿಸಿ, ಪ್ರತಿಭಟನೆ ಆರಂಭಿಸಿದರು.</p>.<p>‘ಬೆಳಿಗ್ಗೆ 8 ರಿಂದ ಮಧ್ಯಾಹ್ನ 12 ಮತ್ತು ಮಧ್ಯಾಹ್ನ 4 ರಿಂದ ರಾತ್ರಿ 9ರವರೆಗಿನ ಅವಧಿಯಲ್ಲಿ ಟ್ಯಾಂಕರ್ಗಳಿಗೆ ಹುಬ್ಬಳ್ಳಿ–ಧಾರವಾಡ ಪ್ರವೇಶಿಸಲು ನಿರ್ಬಂಧಿಸಿರುವುದನ್ನು ತೆರವುಗೊಳಿಸಬೇಕು. ಶನಿವಾರ ಟ್ಯಾಂಕರ್ಗಳಿಗೆ ಇಂಧನ ತುಂಬಿಸಿಲ್ಲ. ಡಿಪೊ, ಸ್ಟೇಷನ್ಗಳಲ್ಲಿ ಇಂಧನ ದಾಸ್ತಾನು ಇರುವುದರಿಂದ ಸದ್ಯಕ್ಕೆ ಸಮಸ್ಯೆಯಾಗಿಲ್ಲ. ಬೇಡಿಕೆ ಈಡೇರಿಸುವವರೆಗೆ ನಾವು ಪ್ರತಿಭಟನೆ ಮುಂದುವರೆಸುತ್ತೇವೆ’ ಎಂದು ಸಂಘಟನೆಯ ಮುಖಂಡ ಮೂರ್ತಿಮಮದಾಪುರ ತಿಳಿಸಿದರು.</p>.<p>‘ನಮ್ಮ ಸಾರಿಗೆ ಡಿಪೊಗಳಲ್ಲಿ ಇಂಧನ ದಾಸ್ತಾನು ಇದೆ. ಬಸ್ಗಳ ಸಂಚಾರಕ್ಕೆ ಇಂಧನ ಕೊರತೆ ಇಲ್ಲ. ಹಾಸನದಿಂದ ಇಂಧನ ಪೂರೈಕೆಗೆ ಮುಂಜಾಗ್ರತೆಯಾಗಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ’ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್ಡಬ್ಲ್ಯುಕೆಆರ್ಟಿಸಿ) ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ. ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಧಾರವಾಡದ ರಾಯಪುರದಲ್ಲಿ ಟ್ಯಾಂಕರ್ಗಳಲ್ಲಿ ಇಂಧನ ತುಂಬಿಸಿ ಹುಬ್ಬಳ್ಳಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ,. ಹೊಸಪೇಟೆ, ಬಳ್ಳಾರಿ, ರಾಯಚೂರು, ಬೆಳಗಾವಿ, ವಿಜಯಪುರ, ಕಾರವಾರ, ಬಾಗಲಕೋಟೆ, ಶಿವಮೊಗ್ಗ ಮತ್ತು ದಾವಣಗೆರೆಗೆ ನಿತ್ಯ ಕಳುಹಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>