ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಿಗೆ ನೌಕರರಿಂದ ಪ್ರತಿಭಟನೆ

Last Updated 5 ಆಗಸ್ಟ್ 2019, 17:08 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳ ಸೋಮವಾರ ಪ್ರತಿಭಟನೆ ನಡೆಸಿ, ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿತು.

ನಗರದ ಗೋಕುಲ್ ರಸ್ತೆಯ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಯಿಂದ ಮಹಾಮಂಡಳದ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಶರ್ಮಾ ನೇತೃತ್ವದಲ್ಲಿ ಪ್ರತಿಭಟನಾ ರ‍್ಯಾಲಿ ನಡೆಸಿದ ಪ್ರತಿಭಟನಾಕಾರರು, ಸರ್ಕಾರದ ಮತ್ತು ಆಡಳಿತ ವ್ಯವಸ್ಥೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವಿಚಾರಣೆ ಎದುರಿಸುತ್ತಿರುವ, ಗೈರು ಹಾಜರಿ ಕಾರಣ ಕೊಟ್ಟು ಬೇರೆ ವಿಭಾಗಗಳಿಗೆ ವರ್ಗಾವಣೆ ಮಾಡಿರುವವರ ಆದೇಶಗಳನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿದರು. ಸಮವಸ್ತ್ರಗಳನ್ನು ಕೊಡಬೇಕು. ಬಾಕಿ ವೇತನ ಪಾವತಿಸಬೇಕು. ನಿವೃತ್ತಿ ನೌಕರರಿಗೆ ಉಪಧನ, ರಜೆ ನಗದೀಕರಣ ನೀಡಬೇಕು, ಘಟಕ ಮಟ್ಟದಲ್ಲಿ ಕಾನೂನು ಬಾಹಿರ ದಂಡ ವಿಧಿಸುವುದನ್ನು ನಿಲ್ಲಿಸಬೇಕು ಎನ್ನುವುದು ಸೇರಿದಂತೆ ಒಟ್ಟು 24 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.

ಪ್ರಕಾಶ ಮೂರ್ತಿ, ಮಂಜುಳಾ ನಾಯಕ, ಈರಣ್ಣ ಮಧುವಾಲ, ಸಿ.ಎ. ಕೋಟಿ, ಬಿ.ವಿ. ಕುಲಕರ್ಣಿ, ಎಂ.ವಿ. ಕಲಭಾವಿ, ಎಂ.ಎಸ್. ಪವಾರ, ರಾಮೇನಹಳ್ಳಿ, ಜಿ.ಎಸ್. ಕಾಳೆ, ಆರ್.ಆರ್. ಕೊಟಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT